ಮಳೆ ತಂದ ಅವಾಂತರ: ನೂರಾರು ಎಕರೆ ಬೆಳೆ ಹಾನಿ: ‘ಕಾಟಾಚಾರದ ಜಿಲ್ಲಾಧಿಕಾರಿಗಳ ಬೆಳೆ ಹಾನಿ ವಿಸಿಟ್’: ಅಧಿಕಾರಿಗಳ ವಿರುದ್ಧ ರೈತರು ಗರಂ..!

ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದರೆ ಕೃಷಿ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಅಕ್ರೋಶ ವ್ಯಕ್ತಪಡಿಸುತ್ತಾರೆಂಬ ಕಾರಣಕ್ಕೆ, ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿದ್ದಾರೆ ಅಧಿಕಾರಿಗಳು, ಕೇವಲ 10 ನಿಮಿಷಗಳ ಅವಧಿಯಲ್ಲಿ ಕೇವಲ ಒಂದು ತೋಟಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿಂದ ತೆರಳಿದ್ದಾರೆ, ಕಾಟಚಾರಕ್ಕೆ ನಡೆದ ಜಿಲ್ಲಾಧಿಕಾರಿಗಳ ಬೆಳೆಹಾನಿ ಭೇಟಿ ಬಗ್ಗೆ ರೈತರು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.

ಮಳೆಯಿಂದ ಬೆಳೆ ನಾಶವಾದ ತೋಟಗಳಿಗೆ ಜಿಲ್ಲಾಧಿಕಾರಿಗಳಾದ ಆರ್ ಲತಾ ಭೇಟಿ ನೀಡಿ ಪರಿಶೀಲನೆ ನಡೆಸುವುದ್ದಾಗಿ ಹೇಳಿದ್ರು, ಅದರಂತೆ ಇಂದು ಬೆಳಗ್ಗೆ 9:30ಕ್ಕೆ ಕಸವನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದರು, ಜಿಲ್ಲಾಧಿಕಾರಿಗಳಿಗೆ ತಮ್ಮ ನೋವು ಹೇಳಲು ಸಾಕಷ್ಟು ರೈತರು ಗ್ರಾಮದಲ್ಲಿ ಕಾದಿದ್ದರು, ತಮಗಾಗಿ ಕಾದಿದ್ದ ರೈತರನ್ನ ಬಿಟ್ಟು ಗ್ರಾಮದ ಹೊರಗಿನ ಒಂದು ತೋಟಕ್ಕೆ ಭೇಟಿ ಕೆಲವೇ ಕ್ಷಣದಲ್ಲಿ ಅಲ್ಲಿಂದ ತೆರಳಿದ್ದಾರೆ, ಜಿಲ್ಲಾಧಿಕಾರಿಗಳಿಗೆ ಕಾದಿದ್ದ ರೈತರು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತಾರೆ, ಇದರಿಂದ ಹೆದರಿದ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿ ರೈತರು ಭೇಟಿಯಾಗದಂತೆ ಮಾಡಿದ್ದಾರೆಂದು ತಮ್ಮ ಸಿಟ್ಟು ಹೊರ ಹಾಕಿದ ರೈತ ಅಂಬರೀಷ್.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

6 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

8 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

9 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

15 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

16 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

19 hours ago