ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…