ಮಳೆ ತಂದ ಅವಾಂತರ: ನೂರಾರು ಎಕರೆ ಬೆಳೆ ಹಾನಿ: ‘ಕಾಟಾಚಾರದ ಜಿಲ್ಲಾಧಿಕಾರಿಗಳ ಬೆಳೆ ಹಾನಿ ವಿಸಿಟ್’: ಅಧಿಕಾರಿಗಳ ವಿರುದ್ಧ ರೈತರು ಗರಂ..!

ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದರೆ ಕೃಷಿ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಅಕ್ರೋಶ ವ್ಯಕ್ತಪಡಿಸುತ್ತಾರೆಂಬ ಕಾರಣಕ್ಕೆ, ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿದ್ದಾರೆ ಅಧಿಕಾರಿಗಳು, ಕೇವಲ 10 ನಿಮಿಷಗಳ ಅವಧಿಯಲ್ಲಿ ಕೇವಲ ಒಂದು ತೋಟಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿಂದ ತೆರಳಿದ್ದಾರೆ, ಕಾಟಚಾರಕ್ಕೆ ನಡೆದ ಜಿಲ್ಲಾಧಿಕಾರಿಗಳ ಬೆಳೆಹಾನಿ ಭೇಟಿ ಬಗ್ಗೆ ರೈತರು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.

ಮಳೆಯಿಂದ ಬೆಳೆ ನಾಶವಾದ ತೋಟಗಳಿಗೆ ಜಿಲ್ಲಾಧಿಕಾರಿಗಳಾದ ಆರ್ ಲತಾ ಭೇಟಿ ನೀಡಿ ಪರಿಶೀಲನೆ ನಡೆಸುವುದ್ದಾಗಿ ಹೇಳಿದ್ರು, ಅದರಂತೆ ಇಂದು ಬೆಳಗ್ಗೆ 9:30ಕ್ಕೆ ಕಸವನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದರು, ಜಿಲ್ಲಾಧಿಕಾರಿಗಳಿಗೆ ತಮ್ಮ ನೋವು ಹೇಳಲು ಸಾಕಷ್ಟು ರೈತರು ಗ್ರಾಮದಲ್ಲಿ ಕಾದಿದ್ದರು, ತಮಗಾಗಿ ಕಾದಿದ್ದ ರೈತರನ್ನ ಬಿಟ್ಟು ಗ್ರಾಮದ ಹೊರಗಿನ ಒಂದು ತೋಟಕ್ಕೆ ಭೇಟಿ ಕೆಲವೇ ಕ್ಷಣದಲ್ಲಿ ಅಲ್ಲಿಂದ ತೆರಳಿದ್ದಾರೆ, ಜಿಲ್ಲಾಧಿಕಾರಿಗಳಿಗೆ ಕಾದಿದ್ದ ರೈತರು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವೈಫಲ್ಯದ ಬಗ್ಗೆ ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತಾರೆ, ಇದರಿಂದ ಹೆದರಿದ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ದಿಕ್ಕು ತಪ್ಪಿಸಿ ರೈತರು ಭೇಟಿಯಾಗದಂತೆ ಮಾಡಿದ್ದಾರೆಂದು ತಮ್ಮ ಸಿಟ್ಟು ಹೊರ ಹಾಕಿದ ರೈತ ಅಂಬರೀಷ್.

Ramesh Babu

Journalist

Recent Posts

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

1 hour ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

21 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago