ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…