ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…