ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…