ಇಂದು ಬೆಂಗಳೂರು ನಗರದ ಹಲವೆಡೆ ಸುರಿದ ಭಾರೀ ಮಳೆ. ಮಳೆ ಅವಾಂತರದಿಂದ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್. ಈ ವೇಳೆ ಅಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನು ರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.
ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.
ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…