Categories: ರಾಜ್ಯ

ಮಳೆ‌ ತಂದ ಅವಾಂತರ; 23 ವರ್ಷದ ಯುವತಿ ಸಾವು; ಸಿಎಂ ಸಿದ್ದರಾಮಯ್ಯ ಸಾಂತ್ವನ

ಇಂದು ಬೆಂಗಳೂರು ನಗರದ ಹಲವೆಡೆ ಸುರಿದ ಭಾರೀ ಮಳೆ. ಮಳೆ ಅವಾಂತರದಿಂದ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್. ಈ ವೇಳೆ ಅಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನು ರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.

ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

22 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago