ಇಂದು ಬೆಂಗಳೂರು ನಗರದ ಹಲವೆಡೆ ಸುರಿದ ಭಾರೀ ಮಳೆ. ಮಳೆ ಅವಾಂತರದಿಂದ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್. ಈ ವೇಳೆ ಅಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನು ರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.
ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.
ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…