ಇಂದು ಬೆಂಗಳೂರು ನಗರದ ಹಲವೆಡೆ ಸುರಿದ ಭಾರೀ ಮಳೆ. ಮಳೆ ಅವಾಂತರದಿಂದ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್. ಈ ವೇಳೆ ಅಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನು ರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.
ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.
ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…