Categories: ಲೇಖನ

ಮಳೆ ನೀರಿನ ಸಂಗ್ರಹ ಮತ್ತು ಹಂಚಿಕೆಯ ಬಗ್ಗೆ ಕಾರ್ಯ ಯೋಜನೆ ಜಾರಿಯಾಗಬೇಕು….

ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ…….

ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ…..

ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು ನೀರಾವರಿ ತಜ್ಞರು ಈ ಅಧಿಕ ಮಳೆಯ ಗರಿಷ್ಠ ಉಪಯೋಗ ಪಡೆಯಲು ಮತ್ತು ಕೆಲವು ಶಾಶ್ವತ ಭವಿಷ್ಯದ ಯೋಜನೆಗಳನ್ನು ರೂಪಿಸಲು ಪ್ರಯತ್ನಿಸಬೇಕು…..

ವಾತಾವರಣ ಹೀಗೇ ಇರುತ್ತದೆ ಎಂದು ಹೇಳಲಾಗುವುದಿಲ್ಲ. ಕೆಲವು ವರ್ಷಗಳ ನಂತರ ಬರಗಾಲ ಬರಬಹುದು. ಅದರ ಪರಿಣಾಮ ಕಡಿಮೆ ಮಾಡಲು ನೀರಿನ ಸಂಗ್ರಹ ಮತ್ತು ಹಂಚಿಕೆಯ ಬಗ್ಗೆ ಏನಾದರೂ ಕಾರ್ಯ ಯೋಜನೆಯನ್ನು ಜಾರಿಗೊಳಿಸಬೇಕು…..

ಅತಿವೃಷ್ಟಿ ಮತ್ತು ಅನಾವೃಷ್ಟಿಯ ಅನುಭವದ ಆಧಾರದ ಮೇಲೆ ಇದನ್ನು ಪ್ರಾಯೋಗಿಕವಾಗಿ ಪ್ರಯತ್ನಿಸಿದರೆ ಸಾಧ್ಯವಾಗಬಹುದು. ಮುಖ್ಯವಾಗಿ ಶಾಶ್ವತ ಬರಗಾಲ ಪೀಡಿತ ಪ್ರದೇಶಗಳು ಎಂದು ಕರೆಯಲಾಗುತ್ತಿದ್ದ ಜಿಲ್ಲೆ, ತಾಲ್ಲೂಕುಗಳಲ್ಲಿ ಮುಂದೆ ಮಳೆ ಕಡಿಮೆಯಾದಾಗ ಈಗಿನ ಅಧಿಕ ನೀರು ಅಥವಾ ಅಂತರ್ಜಲ ಮಟ್ಟವನ್ನು ಹೇಗೆ ಒಂದಷ್ಟು ಕಾಲ ಉಪಯೋಗಿಸಿಕೊಳ್ಳಬಹುದು ಎಂಬುದರ ಅಂದಾಜು ಭೂಗರ್ಭ ಶಾಸ್ತ್ರಜ್ಞರು ಮಾಡಬಹುದು. ಅದೇರೀತಿ ಈ ಮಳೆಯ ಕಾರಣದಿಂದ ಸೃಷ್ಟಿಯಾದ ಗಿಡಮರಗಳನ್ನು ಒಂದು ದಟ್ಟ ಅರಣ್ಯ ಪ್ರದೇಶವಾಗಿ ಬೆಳೆಸುವ ಸಾಧ್ಯತೆಗಳನ್ನು ಪರಿಶೀಲಿಸಬಹುದು…..

ಸಾಮಾನ್ಯ ಜನರಾದ ನಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಅಥವಾ ತಿಳಿವಳಿಕೆ ಇರುವುದಿಲ್ಲ. ಆದರೆ ಈ‌ ಕ್ಷೇತ್ರಗಳ ತಜ್ಞರು ಈ ಬಗ್ಗೆ ‌ಜಾಗೃತರಾಗಿ ಸರ್ಕಾರದ ಗಮನಸೆಳೆದು ನಿರಂತರ ಕೆಲಸ ಮಾಡಬೇಕು. ಸಾಮಾನ್ಯ ಜನ ಅವರ ಮೇಲೆಯೇ ಭರವಸೆ ಇಟ್ಟಿರುತ್ತಾರೆ ಮತ್ತು ಅವಲಂಬಿಸಿರುತ್ತಾರೆ. ಇದು ಸರ್ಕಾರ ಮತ್ತು ತಜ್ಞರ ಕರ್ತವ್ಯ ಮತ್ತು ಜವಾಬ್ದಾರಿ……

ಆದರೆ ದುರಾದೃಷ್ಟವಶಾತ್ ‌ರಾಜಕೀಯ ಪಕ್ಷಗಳಿಗೆ, ಮಾಧ್ಯಮದವರಿಗೆ ಈ‌‌ ರೀತಿಯ ಶಾಶ್ವತ ‌ಅಭಿವೃದ್ಧಿಗಿಂತ  ಚುನಾವಣೆಯೇ ಬಹುದೊಡ್ಡ ಸುದ್ದಿ ‌ಎಂಬಂತೆ ಪ್ರಚಾರ ಮಾಡುತ್ತಾರೆ. ತಮ್ಮ ಎಲ್ಲಾ ‌ಸಮಯ‌ ತಂತ್ರಗಾರಿಕೆ ಹಣ ಎಲ್ಲವೂ ಅದರಲ್ಲಿಯೇ ಕಳೆಯುತ್ತಾರೆ……

ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ಸರ್ಕಾರದ ಬೊಕ್ಕಸಕ್ಕೆ ಸಾಕಷ್ಟು ಒತ್ತಡ ಬೀಳುತ್ತದೆ. ಕೆಲವೊಮ್ಮೆ ಸಾಲ ಮಾಡಿ ಹಣ ನೀಡಬೇಕಾಗುತ್ತದೆ. ಆದ್ದರಿಂದ ಇಂತಹ ಸಮೃದ್ಧ ನೀರಿನ ಸಂಪನ್ಮೂಲಗಳು ಪ್ರಾಕೃತಿಕವಾಗಿ ಸಿಗುತ್ತಿರುವಾಗ ಇದರ ಪರಿಣಾಮಕಾರಿ ಉಪಯೋಗ ಪಡೆಯುವುದು ಆಡಳಿತದ ಜವಾಬ್ದಾರಿ…..

ಆದರೆ, ಏನು ಮಾಡುವುದು ಸರ್ಕಾರ ಎಂಬುದು ರಾಜಕೀಯ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಇರುವಷ್ಟು ದಿನ ಮಾತ್ರ  ತಮಗೆ ಎಷ್ಟು ಅನುಕೂಲವೋ ಅಷ್ಟು ಮಾಡಿಕೊಂಡು ಹೋಗುವಾಗ ಮನೆಯನ್ನು ಕೆಡಿಸಿಯೇ ಹೋಗುತ್ತಾರೆ. ಮುಂದೆ ಮತ್ತೊಬ್ಬರು….

ರಾಜ್ಯ ನಮ್ಮ ಸ್ವಂತ ಆಸ್ತಿ. ಅದನ್ನು ಮುಂದಿನ ತಲೆಮಾರಿಗೂ ಕೂಡ ಇನ್ನೂ ಉತ್ತಮವಾಗಿ ಬಿಟ್ಟು ಹೋಗಬೇಕು ಎಂಬ ಕಾಳಜಿ ಕಾಣುತ್ತಿಲ್ಲ. ಪ್ರತಿ ಮಳೆಗಾಲ ಅಥವಾ ಬರಗಾಲ ಇವರಿಗೆ ಹಣ ಮಾಡುವ ದಂಧೆಯಾಗಿದೆ…..

ಪ್ರಾಕೃತಿಕ ಸಂಪನ್ಮೂಲಗಳನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಪ್ರಕೃತಿಯ ವಿಕೋಪಗಳ ದುಷ್ಪರಿಣಾಮಗಳನ್ನು ಖಂಡಿತ ಕಡಿಮೆ ಮಾಡಿಕೊಳ್ಳಬಹುದು. ಇಲ್ಲದಿದ್ದರೆ ಪ್ರಕೃತಿಯ ಸಹಜ ವೈಪರೀತ್ಯಗಳನ್ನೇ ಸಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಆಗುವುದು ಖಚಿತ…..

ಆದ್ದರಿಂದ, ದಯವಿಟ್ಟು ಸರ್ಕಾರ ಯಾರದೇ ಇರಲಿ, ದೀರ್ಘಕಾಲದ ಶಾಶ್ವತ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಮುಂದೆ ಹಣ ಸಮಯ ಉಳಿತಾಯ ಮಾಡಲು ಪ್ರಯತ್ನಿಸಿ. ಅಧಿಕಾರ ಎಂಬುದು ನಿಮ್ಮ ಸ್ವಂತ ಆಸ್ತಿಯಲ್ಲ. ಅದು ಒಂದು ಸಾರ್ವಜನಿಕ ಸೇವಾ ವೇದಿಕೆ.

ಅದೇ ಮಾನವೀಯ ಧರ್ಮ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

2 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

3 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

4 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

6 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

9 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

11 hours ago