Categories: ಲೇಖನ

ಮಳೆ ನೀರಿನ ಸಂಗ್ರಹ ಮತ್ತು ಹಂಚಿಕೆಯ ಬಗ್ಗೆ ಕಾರ್ಯ ಯೋಜನೆ ಜಾರಿಯಾಗಬೇಕು….

ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ…….

ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ…..

ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು ನೀರಾವರಿ ತಜ್ಞರು ಈ ಅಧಿಕ ಮಳೆಯ ಗರಿಷ್ಠ ಉಪಯೋಗ ಪಡೆಯಲು ಮತ್ತು ಕೆಲವು ಶಾಶ್ವತ ಭವಿಷ್ಯದ ಯೋಜನೆಗಳನ್ನು ರೂಪಿಸಲು ಪ್ರಯತ್ನಿಸಬೇಕು…..

ವಾತಾವರಣ ಹೀಗೇ ಇರುತ್ತದೆ ಎಂದು ಹೇಳಲಾಗುವುದಿಲ್ಲ. ಕೆಲವು ವರ್ಷಗಳ ನಂತರ ಬರಗಾಲ ಬರಬಹುದು. ಅದರ ಪರಿಣಾಮ ಕಡಿಮೆ ಮಾಡಲು ನೀರಿನ ಸಂಗ್ರಹ ಮತ್ತು ಹಂಚಿಕೆಯ ಬಗ್ಗೆ ಏನಾದರೂ ಕಾರ್ಯ ಯೋಜನೆಯನ್ನು ಜಾರಿಗೊಳಿಸಬೇಕು…..

ಅತಿವೃಷ್ಟಿ ಮತ್ತು ಅನಾವೃಷ್ಟಿಯ ಅನುಭವದ ಆಧಾರದ ಮೇಲೆ ಇದನ್ನು ಪ್ರಾಯೋಗಿಕವಾಗಿ ಪ್ರಯತ್ನಿಸಿದರೆ ಸಾಧ್ಯವಾಗಬಹುದು. ಮುಖ್ಯವಾಗಿ ಶಾಶ್ವತ ಬರಗಾಲ ಪೀಡಿತ ಪ್ರದೇಶಗಳು ಎಂದು ಕರೆಯಲಾಗುತ್ತಿದ್ದ ಜಿಲ್ಲೆ, ತಾಲ್ಲೂಕುಗಳಲ್ಲಿ ಮುಂದೆ ಮಳೆ ಕಡಿಮೆಯಾದಾಗ ಈಗಿನ ಅಧಿಕ ನೀರು ಅಥವಾ ಅಂತರ್ಜಲ ಮಟ್ಟವನ್ನು ಹೇಗೆ ಒಂದಷ್ಟು ಕಾಲ ಉಪಯೋಗಿಸಿಕೊಳ್ಳಬಹುದು ಎಂಬುದರ ಅಂದಾಜು ಭೂಗರ್ಭ ಶಾಸ್ತ್ರಜ್ಞರು ಮಾಡಬಹುದು. ಅದೇರೀತಿ ಈ ಮಳೆಯ ಕಾರಣದಿಂದ ಸೃಷ್ಟಿಯಾದ ಗಿಡಮರಗಳನ್ನು ಒಂದು ದಟ್ಟ ಅರಣ್ಯ ಪ್ರದೇಶವಾಗಿ ಬೆಳೆಸುವ ಸಾಧ್ಯತೆಗಳನ್ನು ಪರಿಶೀಲಿಸಬಹುದು…..

ಸಾಮಾನ್ಯ ಜನರಾದ ನಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಅಥವಾ ತಿಳಿವಳಿಕೆ ಇರುವುದಿಲ್ಲ. ಆದರೆ ಈ‌ ಕ್ಷೇತ್ರಗಳ ತಜ್ಞರು ಈ ಬಗ್ಗೆ ‌ಜಾಗೃತರಾಗಿ ಸರ್ಕಾರದ ಗಮನಸೆಳೆದು ನಿರಂತರ ಕೆಲಸ ಮಾಡಬೇಕು. ಸಾಮಾನ್ಯ ಜನ ಅವರ ಮೇಲೆಯೇ ಭರವಸೆ ಇಟ್ಟಿರುತ್ತಾರೆ ಮತ್ತು ಅವಲಂಬಿಸಿರುತ್ತಾರೆ. ಇದು ಸರ್ಕಾರ ಮತ್ತು ತಜ್ಞರ ಕರ್ತವ್ಯ ಮತ್ತು ಜವಾಬ್ದಾರಿ……

ಆದರೆ ದುರಾದೃಷ್ಟವಶಾತ್ ‌ರಾಜಕೀಯ ಪಕ್ಷಗಳಿಗೆ, ಮಾಧ್ಯಮದವರಿಗೆ ಈ‌‌ ರೀತಿಯ ಶಾಶ್ವತ ‌ಅಭಿವೃದ್ಧಿಗಿಂತ  ಚುನಾವಣೆಯೇ ಬಹುದೊಡ್ಡ ಸುದ್ದಿ ‌ಎಂಬಂತೆ ಪ್ರಚಾರ ಮಾಡುತ್ತಾರೆ. ತಮ್ಮ ಎಲ್ಲಾ ‌ಸಮಯ‌ ತಂತ್ರಗಾರಿಕೆ ಹಣ ಎಲ್ಲವೂ ಅದರಲ್ಲಿಯೇ ಕಳೆಯುತ್ತಾರೆ……

ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ಸರ್ಕಾರದ ಬೊಕ್ಕಸಕ್ಕೆ ಸಾಕಷ್ಟು ಒತ್ತಡ ಬೀಳುತ್ತದೆ. ಕೆಲವೊಮ್ಮೆ ಸಾಲ ಮಾಡಿ ಹಣ ನೀಡಬೇಕಾಗುತ್ತದೆ. ಆದ್ದರಿಂದ ಇಂತಹ ಸಮೃದ್ಧ ನೀರಿನ ಸಂಪನ್ಮೂಲಗಳು ಪ್ರಾಕೃತಿಕವಾಗಿ ಸಿಗುತ್ತಿರುವಾಗ ಇದರ ಪರಿಣಾಮಕಾರಿ ಉಪಯೋಗ ಪಡೆಯುವುದು ಆಡಳಿತದ ಜವಾಬ್ದಾರಿ…..

ಆದರೆ, ಏನು ಮಾಡುವುದು ಸರ್ಕಾರ ಎಂಬುದು ರಾಜಕೀಯ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಇರುವಷ್ಟು ದಿನ ಮಾತ್ರ  ತಮಗೆ ಎಷ್ಟು ಅನುಕೂಲವೋ ಅಷ್ಟು ಮಾಡಿಕೊಂಡು ಹೋಗುವಾಗ ಮನೆಯನ್ನು ಕೆಡಿಸಿಯೇ ಹೋಗುತ್ತಾರೆ. ಮುಂದೆ ಮತ್ತೊಬ್ಬರು….

ರಾಜ್ಯ ನಮ್ಮ ಸ್ವಂತ ಆಸ್ತಿ. ಅದನ್ನು ಮುಂದಿನ ತಲೆಮಾರಿಗೂ ಕೂಡ ಇನ್ನೂ ಉತ್ತಮವಾಗಿ ಬಿಟ್ಟು ಹೋಗಬೇಕು ಎಂಬ ಕಾಳಜಿ ಕಾಣುತ್ತಿಲ್ಲ. ಪ್ರತಿ ಮಳೆಗಾಲ ಅಥವಾ ಬರಗಾಲ ಇವರಿಗೆ ಹಣ ಮಾಡುವ ದಂಧೆಯಾಗಿದೆ…..

ಪ್ರಾಕೃತಿಕ ಸಂಪನ್ಮೂಲಗಳನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಪ್ರಕೃತಿಯ ವಿಕೋಪಗಳ ದುಷ್ಪರಿಣಾಮಗಳನ್ನು ಖಂಡಿತ ಕಡಿಮೆ ಮಾಡಿಕೊಳ್ಳಬಹುದು. ಇಲ್ಲದಿದ್ದರೆ ಪ್ರಕೃತಿಯ ಸಹಜ ವೈಪರೀತ್ಯಗಳನ್ನೇ ಸಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಆಗುವುದು ಖಚಿತ…..

ಆದ್ದರಿಂದ, ದಯವಿಟ್ಟು ಸರ್ಕಾರ ಯಾರದೇ ಇರಲಿ, ದೀರ್ಘಕಾಲದ ಶಾಶ್ವತ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಮುಂದೆ ಹಣ ಸಮಯ ಉಳಿತಾಯ ಮಾಡಲು ಪ್ರಯತ್ನಿಸಿ. ಅಧಿಕಾರ ಎಂಬುದು ನಿಮ್ಮ ಸ್ವಂತ ಆಸ್ತಿಯಲ್ಲ. ಅದು ಒಂದು ಸಾರ್ವಜನಿಕ ಸೇವಾ ವೇದಿಕೆ.

ಅದೇ ಮಾನವೀಯ ಧರ್ಮ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

6 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago