Categories: ಲೇಖನ

ಮಳೆ ನೀರಿನ ಸಂಗ್ರಹ ಮತ್ತು ಹಂಚಿಕೆಯ ಬಗ್ಗೆ ಕಾರ್ಯ ಯೋಜನೆ ಜಾರಿಯಾಗಬೇಕು….

ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ…….

ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ…..

ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು ನೀರಾವರಿ ತಜ್ಞರು ಈ ಅಧಿಕ ಮಳೆಯ ಗರಿಷ್ಠ ಉಪಯೋಗ ಪಡೆಯಲು ಮತ್ತು ಕೆಲವು ಶಾಶ್ವತ ಭವಿಷ್ಯದ ಯೋಜನೆಗಳನ್ನು ರೂಪಿಸಲು ಪ್ರಯತ್ನಿಸಬೇಕು…..

ವಾತಾವರಣ ಹೀಗೇ ಇರುತ್ತದೆ ಎಂದು ಹೇಳಲಾಗುವುದಿಲ್ಲ. ಕೆಲವು ವರ್ಷಗಳ ನಂತರ ಬರಗಾಲ ಬರಬಹುದು. ಅದರ ಪರಿಣಾಮ ಕಡಿಮೆ ಮಾಡಲು ನೀರಿನ ಸಂಗ್ರಹ ಮತ್ತು ಹಂಚಿಕೆಯ ಬಗ್ಗೆ ಏನಾದರೂ ಕಾರ್ಯ ಯೋಜನೆಯನ್ನು ಜಾರಿಗೊಳಿಸಬೇಕು…..

ಅತಿವೃಷ್ಟಿ ಮತ್ತು ಅನಾವೃಷ್ಟಿಯ ಅನುಭವದ ಆಧಾರದ ಮೇಲೆ ಇದನ್ನು ಪ್ರಾಯೋಗಿಕವಾಗಿ ಪ್ರಯತ್ನಿಸಿದರೆ ಸಾಧ್ಯವಾಗಬಹುದು. ಮುಖ್ಯವಾಗಿ ಶಾಶ್ವತ ಬರಗಾಲ ಪೀಡಿತ ಪ್ರದೇಶಗಳು ಎಂದು ಕರೆಯಲಾಗುತ್ತಿದ್ದ ಜಿಲ್ಲೆ, ತಾಲ್ಲೂಕುಗಳಲ್ಲಿ ಮುಂದೆ ಮಳೆ ಕಡಿಮೆಯಾದಾಗ ಈಗಿನ ಅಧಿಕ ನೀರು ಅಥವಾ ಅಂತರ್ಜಲ ಮಟ್ಟವನ್ನು ಹೇಗೆ ಒಂದಷ್ಟು ಕಾಲ ಉಪಯೋಗಿಸಿಕೊಳ್ಳಬಹುದು ಎಂಬುದರ ಅಂದಾಜು ಭೂಗರ್ಭ ಶಾಸ್ತ್ರಜ್ಞರು ಮಾಡಬಹುದು. ಅದೇರೀತಿ ಈ ಮಳೆಯ ಕಾರಣದಿಂದ ಸೃಷ್ಟಿಯಾದ ಗಿಡಮರಗಳನ್ನು ಒಂದು ದಟ್ಟ ಅರಣ್ಯ ಪ್ರದೇಶವಾಗಿ ಬೆಳೆಸುವ ಸಾಧ್ಯತೆಗಳನ್ನು ಪರಿಶೀಲಿಸಬಹುದು…..

ಸಾಮಾನ್ಯ ಜನರಾದ ನಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಅಥವಾ ತಿಳಿವಳಿಕೆ ಇರುವುದಿಲ್ಲ. ಆದರೆ ಈ‌ ಕ್ಷೇತ್ರಗಳ ತಜ್ಞರು ಈ ಬಗ್ಗೆ ‌ಜಾಗೃತರಾಗಿ ಸರ್ಕಾರದ ಗಮನಸೆಳೆದು ನಿರಂತರ ಕೆಲಸ ಮಾಡಬೇಕು. ಸಾಮಾನ್ಯ ಜನ ಅವರ ಮೇಲೆಯೇ ಭರವಸೆ ಇಟ್ಟಿರುತ್ತಾರೆ ಮತ್ತು ಅವಲಂಬಿಸಿರುತ್ತಾರೆ. ಇದು ಸರ್ಕಾರ ಮತ್ತು ತಜ್ಞರ ಕರ್ತವ್ಯ ಮತ್ತು ಜವಾಬ್ದಾರಿ……

ಆದರೆ ದುರಾದೃಷ್ಟವಶಾತ್ ‌ರಾಜಕೀಯ ಪಕ್ಷಗಳಿಗೆ, ಮಾಧ್ಯಮದವರಿಗೆ ಈ‌‌ ರೀತಿಯ ಶಾಶ್ವತ ‌ಅಭಿವೃದ್ಧಿಗಿಂತ  ಚುನಾವಣೆಯೇ ಬಹುದೊಡ್ಡ ಸುದ್ದಿ ‌ಎಂಬಂತೆ ಪ್ರಚಾರ ಮಾಡುತ್ತಾರೆ. ತಮ್ಮ ಎಲ್ಲಾ ‌ಸಮಯ‌ ತಂತ್ರಗಾರಿಕೆ ಹಣ ಎಲ್ಲವೂ ಅದರಲ್ಲಿಯೇ ಕಳೆಯುತ್ತಾರೆ……

ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ಸರ್ಕಾರದ ಬೊಕ್ಕಸಕ್ಕೆ ಸಾಕಷ್ಟು ಒತ್ತಡ ಬೀಳುತ್ತದೆ. ಕೆಲವೊಮ್ಮೆ ಸಾಲ ಮಾಡಿ ಹಣ ನೀಡಬೇಕಾಗುತ್ತದೆ. ಆದ್ದರಿಂದ ಇಂತಹ ಸಮೃದ್ಧ ನೀರಿನ ಸಂಪನ್ಮೂಲಗಳು ಪ್ರಾಕೃತಿಕವಾಗಿ ಸಿಗುತ್ತಿರುವಾಗ ಇದರ ಪರಿಣಾಮಕಾರಿ ಉಪಯೋಗ ಪಡೆಯುವುದು ಆಡಳಿತದ ಜವಾಬ್ದಾರಿ…..

ಆದರೆ, ಏನು ಮಾಡುವುದು ಸರ್ಕಾರ ಎಂಬುದು ರಾಜಕೀಯ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಇರುವಷ್ಟು ದಿನ ಮಾತ್ರ  ತಮಗೆ ಎಷ್ಟು ಅನುಕೂಲವೋ ಅಷ್ಟು ಮಾಡಿಕೊಂಡು ಹೋಗುವಾಗ ಮನೆಯನ್ನು ಕೆಡಿಸಿಯೇ ಹೋಗುತ್ತಾರೆ. ಮುಂದೆ ಮತ್ತೊಬ್ಬರು….

ರಾಜ್ಯ ನಮ್ಮ ಸ್ವಂತ ಆಸ್ತಿ. ಅದನ್ನು ಮುಂದಿನ ತಲೆಮಾರಿಗೂ ಕೂಡ ಇನ್ನೂ ಉತ್ತಮವಾಗಿ ಬಿಟ್ಟು ಹೋಗಬೇಕು ಎಂಬ ಕಾಳಜಿ ಕಾಣುತ್ತಿಲ್ಲ. ಪ್ರತಿ ಮಳೆಗಾಲ ಅಥವಾ ಬರಗಾಲ ಇವರಿಗೆ ಹಣ ಮಾಡುವ ದಂಧೆಯಾಗಿದೆ…..

ಪ್ರಾಕೃತಿಕ ಸಂಪನ್ಮೂಲಗಳನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಪ್ರಕೃತಿಯ ವಿಕೋಪಗಳ ದುಷ್ಪರಿಣಾಮಗಳನ್ನು ಖಂಡಿತ ಕಡಿಮೆ ಮಾಡಿಕೊಳ್ಳಬಹುದು. ಇಲ್ಲದಿದ್ದರೆ ಪ್ರಕೃತಿಯ ಸಹಜ ವೈಪರೀತ್ಯಗಳನ್ನೇ ಸಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಆಗುವುದು ಖಚಿತ…..

ಆದ್ದರಿಂದ, ದಯವಿಟ್ಟು ಸರ್ಕಾರ ಯಾರದೇ ಇರಲಿ, ದೀರ್ಘಕಾಲದ ಶಾಶ್ವತ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಮುಂದೆ ಹಣ ಸಮಯ ಉಳಿತಾಯ ಮಾಡಲು ಪ್ರಯತ್ನಿಸಿ. ಅಧಿಕಾರ ಎಂಬುದು ನಿಮ್ಮ ಸ್ವಂತ ಆಸ್ತಿಯಲ್ಲ. ಅದು ಒಂದು ಸಾರ್ವಜನಿಕ ಸೇವಾ ವೇದಿಕೆ.

ಅದೇ ಮಾನವೀಯ ಧರ್ಮ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

3 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

7 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

18 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

19 hours ago

ಸಚಿವ ಕೆ.ಎಚ್.ಮುನಿಯಪ್ಪವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ- ಯೂತ್ ಕಾಂಗ್ರೆಸ್ ಸ್ಪಷ್ಟನೆ

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…

20 hours ago

ಜೈಲಿನಲ್ಲಿ ದರ್ಶನ್ ಗೆ ನರಕಯಾತನೆ: “ನಾನು ಬಿಸಿಲು ನೋಡಿ 30 ದಿನಗಳಾಗಿವೆ- ಕೈ ಎಲ್ಲಾ ಫಂಗಸ್ ಬಂದಿದೆ- ನನಗೆ ಪಾಯಿಸನ್ ಕೊಡಿ”- ಜಡ್ಜ್ ಬಳಿ ದರ್ಶನ್ ಮನವಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…

1 day ago