ಮಳೆ… ಮಳೆ…. ಜಡಿ ಮಳೆ… ಜನ, ಜಾನುವಾರು ವಿಲವಿಲ… ಸೂರ್ಯನ ದರ್ಶನಕ್ಕಾಗಿ ಜನ ವೈಟಿಂಗ್…

ರಾಜ್ಯದ ಹಲವು ಕಡೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನ‌ಜೀವನ ಅಸ್ತವ್ಯಸ್ಥಗೊಂಡಿದ್ದು, ಜಾನುವಾರು, ಪಕ್ಷಿಗಳು ಮಳೆಯಲ್ಲಿ ನೆಂದು ನೆಂದು ತೊಪ್ಪೆಯಾಗಿವೆ. ವೃದ್ಧರು, ರೋಗಿಗಳು ಚಳಿ, ಮಳೆಯ ತೇವಾಂಶದಿಂದ ಜೀವ ಭಯದಲ್ಲಿದ್ದಾರೆ. ಕೂಲಿಕಾರರು, ಕಾರ್ಮಿಕರು, ಉದ್ಯೋಗಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೂಕ್ತ ಸಮಯಕ್ಕೆ ಕೆಲಸಕ್ಕೆ, ತರಗತಿಗಳಿಗೆ ಹೋಗಲು ಆಗದೇ ಪರಿತಪಿಸುತ್ತಿದ್ದಾರೆ.

ಕಳೆದೆರಡು ತಿಂಗಳಿಂದ ಮಳೆಯಿಲ್ಲದೆ ಪರದಾಡುತ್ತಿದ್ದ ರೈತರು ಈಗ ಬಿಟ್ಟು ಬಿಡದೆ ಧೋ ಎಂದು ಸುರಿಯಿತ್ತಿರುವ ಮಳೆಗೆ ಹೈರಣಾಗಿ ಹೋಗಿದ್ದಾರೆ. ಅರೆಬರೆ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಈಗ ಮಳೆಯಿಂದ ಅದು ಕೂಡ ಕೈತಪ್ಪಿ ಹೋಗುವ ಭೀತಿಯಲ್ಲಿದ್ದಾರೆ. ರೈತರು ಬೆಳೆದ ಬೆಳೆಗಳು ಅತಿಯಾದ ತೇವಾಂಶದಿಂದ ನೆಲಕಚ್ಚುತ್ತಿವೆ. ತಗ್ಗು ಪ್ರದೇಶದಲ್ಲಿ ವಾಸ ಮಾಡುವವರಿಗೆ ಮನೆಗಳಿಗೆ ನೀರು ನುಗ್ಗುವ ಭೀತಿಯಲ್ಲಿದ್ದಾರೆ. ಕೆಲ ಮನೆಗಳ ಮೇಲ್ಛಾವಣಿ ಸೋರುತ್ತಿವೆ. ಹಳೇ ಮನೆಗಳು ನೆಲಕ್ಕುರುಳಿತ್ತಿವೆ. ವ್ಯಾಪಾರಸ್ಥರಿಗೆ ಸರಿಯಾಗಿ ವ್ಯಾಪಾರವಾಗದೇ ಮಂಕಾಗಿದ್ದಾರೆ. ಹೀಗೆ ಜಡಿ ಮಳೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿ ಸಮಸ್ಯೆ ತಂದೊಡ್ಡಿದೆ.

ಕೆಲವು ಕಡೆ ಅಂಗನವಾಡಿ ಕೇಂದ್ರಗಳು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗಿದೆ. ಕೆಲವರು ವಿಧಿ ಇಲ್ಲದೇ ಕೊಡೆ ಹಿಡಿದು ಕೆಲಸ ಕಾರ್ಯಗಳಿಗೆ ಹೋಗುತ್ತಿದ್ದಾರೆ. ಕೆಲ ಮಣ್ಣಿನ ರಸ್ತೆಗಳು ಜಲಾವೃತಗೊಂಡು ಕೆಸರುಗದ್ದೆಯಂತಾಗಿವೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಗುಂಡಿಗಳೇ ಕಾಣದಂತಾಗಿ ವಾಹನ ಸವಾರರು ಅಪಘಾತದ ಭೀತಿಯಲ್ಲಿ ಸಂಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ…

ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಕಾರಣ ಇನ್ನೂ 2-3 ದಿನ ಇದೇ ರೀತಿಯ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಟ್ಟಿನಲ್ಲಿ ಸೂರ್ಯನ ದರ್ಶನಕ್ಕಾಗಿ ಜನ ಕಾಯುತ್ತಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

5 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

21 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago