ರಾಜ್ಯದ ಹಲವು ಕಡೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಜಾನುವಾರು, ಪಕ್ಷಿಗಳು ಮಳೆಯಲ್ಲಿ ನೆಂದು ನೆಂದು ತೊಪ್ಪೆಯಾಗಿವೆ. ವೃದ್ಧರು, ರೋಗಿಗಳು ಚಳಿ, ಮಳೆಯ ತೇವಾಂಶದಿಂದ ಜೀವ ಭಯದಲ್ಲಿದ್ದಾರೆ. ಕೂಲಿಕಾರರು, ಕಾರ್ಮಿಕರು, ಉದ್ಯೋಗಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೂಕ್ತ ಸಮಯಕ್ಕೆ ಕೆಲಸಕ್ಕೆ, ತರಗತಿಗಳಿಗೆ ಹೋಗಲು ಆಗದೇ ಪರಿತಪಿಸುತ್ತಿದ್ದಾರೆ.
ಕಳೆದೆರಡು ತಿಂಗಳಿಂದ ಮಳೆಯಿಲ್ಲದೆ ಪರದಾಡುತ್ತಿದ್ದ ರೈತರು ಈಗ ಬಿಟ್ಟು ಬಿಡದೆ ಧೋ ಎಂದು ಸುರಿಯಿತ್ತಿರುವ ಮಳೆಗೆ ಹೈರಣಾಗಿ ಹೋಗಿದ್ದಾರೆ. ಅರೆಬರೆ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಈಗ ಮಳೆಯಿಂದ ಅದು ಕೂಡ ಕೈತಪ್ಪಿ ಹೋಗುವ ಭೀತಿಯಲ್ಲಿದ್ದಾರೆ. ರೈತರು ಬೆಳೆದ ಬೆಳೆಗಳು ಅತಿಯಾದ ತೇವಾಂಶದಿಂದ ನೆಲಕಚ್ಚುತ್ತಿವೆ. ತಗ್ಗು ಪ್ರದೇಶದಲ್ಲಿ ವಾಸ ಮಾಡುವವರಿಗೆ ಮನೆಗಳಿಗೆ ನೀರು ನುಗ್ಗುವ ಭೀತಿಯಲ್ಲಿದ್ದಾರೆ. ಕೆಲ ಮನೆಗಳ ಮೇಲ್ಛಾವಣಿ ಸೋರುತ್ತಿವೆ. ಹಳೇ ಮನೆಗಳು ನೆಲಕ್ಕುರುಳಿತ್ತಿವೆ. ವ್ಯಾಪಾರಸ್ಥರಿಗೆ ಸರಿಯಾಗಿ ವ್ಯಾಪಾರವಾಗದೇ ಮಂಕಾಗಿದ್ದಾರೆ. ಹೀಗೆ ಜಡಿ ಮಳೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿ ಸಮಸ್ಯೆ ತಂದೊಡ್ಡಿದೆ.
ಕೆಲವು ಕಡೆ ಅಂಗನವಾಡಿ ಕೇಂದ್ರಗಳು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗಿದೆ. ಕೆಲವರು ವಿಧಿ ಇಲ್ಲದೇ ಕೊಡೆ ಹಿಡಿದು ಕೆಲಸ ಕಾರ್ಯಗಳಿಗೆ ಹೋಗುತ್ತಿದ್ದಾರೆ. ಕೆಲ ಮಣ್ಣಿನ ರಸ್ತೆಗಳು ಜಲಾವೃತಗೊಂಡು ಕೆಸರುಗದ್ದೆಯಂತಾಗಿವೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಗುಂಡಿಗಳೇ ಕಾಣದಂತಾಗಿ ವಾಹನ ಸವಾರರು ಅಪಘಾತದ ಭೀತಿಯಲ್ಲಿ ಸಂಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ…
ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಕಾರಣ ಇನ್ನೂ 2-3 ದಿನ ಇದೇ ರೀತಿಯ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಒಟ್ಟಿನಲ್ಲಿ ಸೂರ್ಯನ ದರ್ಶನಕ್ಕಾಗಿ ಜನ ಕಾಯುತ್ತಿದ್ದಾರೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…