ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದ್ದು, ರೈತರ ಜಮೀನುಗಳಿಗೆ ಹಾಗೂ ಜನ ನಿಬಿಡ ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಚರಂಡಿ, ರಾಜ ಕಾಲುವೆಗಳ ತ್ಯಾಜ್ಯವನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ. ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಹೇಳಿದರು.
ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಂಗಾರು ಪೂರ್ವ ಮಳೆಯಿಂದ 14.92 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಪ್ರಮುಖವಾಗಿ ಬಾಳೆ, ಮಾವು, ತರಕಾರಿ ಬೆಳೆ ಹಾಳಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದರು.
ಬರ ಪರಿಹಾರ ಹಣ ಅರ್ಹ ರೈತರಿಗೆ ನೀಡಲಾಗಿದೆ. ಬೆಳೆ ನಷ್ಟ ಆಗಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದ ನಂತರ ಶೀಘ್ರ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಎಂ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…