ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದ್ದು, ರೈತರ ಜಮೀನುಗಳಿಗೆ ಹಾಗೂ ಜನ ನಿಬಿಡ ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಚರಂಡಿ, ರಾಜ ಕಾಲುವೆಗಳ ತ್ಯಾಜ್ಯವನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ. ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಹೇಳಿದರು.
ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಂಗಾರು ಪೂರ್ವ ಮಳೆಯಿಂದ 14.92 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಪ್ರಮುಖವಾಗಿ ಬಾಳೆ, ಮಾವು, ತರಕಾರಿ ಬೆಳೆ ಹಾಳಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದರು.
ಬರ ಪರಿಹಾರ ಹಣ ಅರ್ಹ ರೈತರಿಗೆ ನೀಡಲಾಗಿದೆ. ಬೆಳೆ ನಷ್ಟ ಆಗಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದ ನಂತರ ಶೀಘ್ರ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಎಂ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…