ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದ್ದು, ರೈತರ ಜಮೀನುಗಳಿಗೆ ಹಾಗೂ ಜನ ನಿಬಿಡ ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಚರಂಡಿ, ರಾಜ ಕಾಲುವೆಗಳ ತ್ಯಾಜ್ಯವನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ. ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಹೇಳಿದರು.

ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮುಂಗಾರು ಪೂರ್ವ ಮಳೆಯಿಂದ 14.92 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಪ್ರಮುಖವಾಗಿ ಬಾಳೆ, ಮಾವು, ತರಕಾರಿ ಬೆಳೆ ಹಾಳಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದರು.

ಬರ ಪರಿಹಾರ ಹಣ ಅರ್ಹ ರೈತರಿಗೆ ನೀಡಲಾಗಿದೆ. ಬೆಳೆ ನಷ್ಟ ಆಗಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದ ನಂತರ ಶೀಘ್ರ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಎಂ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago