ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿ ಕಾಫಿ ಗಿಡಗಳ ಮಧ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಪುರುಷನೋರ್ವನ ಮೃತದೇಹ ಪತ್ತೆಯಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕೊಲೆ ಪ್ರಕರಣವನ್ನು ಚಾಣಕ್ಷತನದಿಂದ ಭೇದಿಸುವಲ್ಲಿ ಕೊಡಗು ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.
ಅತ್ಯಂತ ಕ್ಲಿಷ್ಟಕರವೆನಿಸಿದ್ದ ಅಂತಾರಾಜ್ಯಗಳ ಲಿಂಕ್ ಹೊಂದಿರುವ ಈ ನಿಗೂಢ ಕೊಲೆ ಪ್ರಕರಣದ ಜಾಡನ್ನು ಸಿನಿಮೀಯ ರೀತಿಯಲ್ಲಿ ಆರೋಪಿಗಳೇ ದಂಗಾಗುವ ರೀತಿಯಲ್ಲಿ ಬಯಲಿಗೆಳೆದು ಅವರನ್ನು ಕಾರಾಗೃಹ ವಾಸಕ್ಕೆ ತುತ್ತಾಗುವಂತೆ ಮಾಡಿರುವ ಪೊಲೀಸರ ನಿರಂತರ ಕಾರ್ಯಾಚರಣೆ, ಶ್ರಮ ಹಾಗೂ ಸಫಲತೆಗೆ ಹ್ಯಾಟ್ಸ್ ಅಪ್ ಅನ್ನಲೇ ಬೇಕು.
ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡನಿಗೆ ಗತಿಕಾಣಿಸಿದ ಓರ್ವ ಮಹಿಳೆ ಸೇರಿದಂತೆ ಒಟ್ಟು ಮೂವರು ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ ಹಾಗೂ ಮರ್ಸಿಡಸ್ ಬೆಂಝ್ ಕಾರು, ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಮೃತ ರಮೇಶ್ ಕುಮಾರನ ಎರಡನೇ ಪತ್ನಿ ನಿಹಾರಿಕ ಮತ್ತು ಆಕೆಯ ಬಾಯ್ ಫ್ರೆಂಡ್ಸ್ ಗಳಾದ
ಹರಿಯಾಣದ ಅಂಕುರ್ ರಾಣಾ ಮತ್ತು ನಿಖಿಲ್ ಎಂಬುವವರುಗಳೇ ಬಂಧಿತ ಆರೋಪಿಗಳಾಗಿದ್ದಾರೆ.
ತೆಲಂಗಾಣದ ರಮೇಶ್ ಕುಮಾರ್ ಎಂಬಾತ ಬೆಂಗಳೂರು ರಾಮಮೂರ್ತಿನಗರದಲ್ಲಿ ವಾಸವಾಗಿರುವ ಮೂಲತಃ ತೆಲಂಗಾಣದವಳಾದ ತನ್ನ ಪತ್ನಿ ಪಂತುಲ್ ನಿಹಾರಿಕ, ಹರ್ಯಾಣ ರಾಜ್ಯದ ಅಂಕುರು ರಾಣಾ ಹಾಗೂ ನಿಖಿಲ್ ಮೈರೆಡ್ಡಿ ಎಂಬುವವರಿಂದ ಕೊಲೆಗೀಡಾದವನಾಗಿದ್ದಾನೆ.
ದಿನಾಂಕ 08-10-2024 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ ಸಂದೇಶ್ ಎಂಬುವವರ ಕಾಫಿ ತೋಟದಲ್ಲಿ ಅರ್ಧಂಬರ್ಧ ಬೆಂದಿರುವ ಗಂಡಸಿನ ಶವವನ್ನು ಕಾರ್ಮಿಕರು ನೋಡಿದ್ದು ಮಾಲೀಕರು ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕಲಂ 103, 234 ಬಿ. ಎನ್. ಎಸ್. ರಂತೆ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಡಗು ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಕೆ.ಎಸ್. ಸುಂದರ್ ರಾಜ್, ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಇವರ ಮಾರ್ಗದರ್ಶನದಲ್ಲಿ ಮೃತನ ಹಾಗೂ ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಪೊಲೀಸ್ ಠಾಣೆಯ ನಿರೀಕ್ಷಕರಾದ ಮುದ್ದು ಮಾದೇವ ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್, ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಇಲಾಖೆಯ ಇನ್ನಿತರ ಅಧಿಕಾರಿಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ 16 ಜನರ ಒಟ್ಟು 4 ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಈ ತಂಡಗಳು ವಿವಧೆಡೆ ಸುಮಾರು 500 ಕ್ಕಿಂತಲೂ ಹೆಚ್ಚಿನ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಮೊಬೈಲ್ ಕರೆಗಳ ಜಾಡು ಹಿಡಿದು 10 ದಿನ ಕಾರ್ಯಾಚರಣೆ ನಡೆಸಿ ಕಾರನ್ನು ಕೃತ್ಯಕ್ಕೆ ಬಳಸಿರಬಹುದಾದ ಸಂಶಯಾಸ್ಪದ ಮೇರೆ ಆರೋಪಿಗಳನ್ನು ಖೆಡ್ದಾಕ್ಕೆ ಕೆಡವಲಾಗಿದೆ.
*ಘಟನೆಯ ಹಿನ್ನೆಲೆ*
ಆರೋಪಿ ನಿಹಾರಿಕಳು ಮೃತ ರಮೇಶ್ ಕುಮಾರ್ ನನ್ನು ಮದುವೆಯಾಗಿದ್ದು, ಆಸ್ತಿ ಮಾರಾಟದಿಂದ 8 ಕೋಟಿ ಹಣ ಪಡೆಯುವ ಉದ್ದೇಶದಿಂದ ಬಾಯ್ ಫ್ರೆಂಡ್ ಹರಿಯಾಣ ಮೂಲದ ಅಂಕುರ್ ರಾಣಾನನ್ನು ದಿನಾಂಕ 01-10-2024 ರಂದು ಮತ್ತು 03-10-2024 ರಂದು ರಮೇಶ್ ಕುಮಾರ್ ನನ್ನು ಹೈದರಾಬಾದ್ ಗೆ ಬರಲು ತಿಳಿಸಿದ್ದಾಳೆ. ಡ್ರಾಪ್ ಮಾಡುವ ನೆಪದಲ್ಲಿ ಮರ್ಸಿಡಸ್ ಬೆಂಜ್ ಕಾರಿನಲ್ಲಿ ಹೊರಟು ತೆಲಂಗಾಣದ ಉಪ್ಪಲ್ – ಭುವನಗಿರಿ ಹೆದ್ದಾರಿಯಲ್ಲಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ರಮೇಶ್ ಕುಮಾರ್ ನನ್ನು ಕೊಲೆ ಮಾಡಿದ್ದಾರೆ. ನಂತರ ಅಲ್ಲಿಂದ ಇವರಿಬ್ಬರು ಕಾರಿನಲ್ಲಿ ಮೃತದೇಹವನ್ನು ಬೆಂಗಳೂರಿಗೆ ತಂದು ಹೊರಮಾವು ಎಂಬಲ್ಲಿದ್ದ ಇನ್ನೋರ್ವ ಬಾಯ್ ಫ್ರೆಂಡ್ ನಿಖಿಲ್ ಗೆ ವಿಷಯ ತಿಳಿಸಿದ್ದಾಳೆ. ನಂತರ ಅದೇ ಕಾರಿನಲ್ಲಿ ಶವವನ್ನು ಸುಂಟಿಕೊಪ್ಪ ಪನ್ಯ ತೋಟಕ್ಕೆ ತಂದು ಬೆಂಕಿಹಚ್ಚಿ ಸುಟ್ಟು ಅಲ್ಲಿಂದ ಹಿಂತಿರುಗಿದ್ದಾರೆ. ಪ್ರಕರಣದ ವಿಶೇಷ ತನಿಖಾಧಿಕಾರಿಯಾಗಿರುವ ಸೋಮವಾರಪೇಟೆ ಪೊಲೀಸ್ ಠಾಣೆಯ ನಿರೀಕ್ಷಕರಾದ ಮುದ್ದು ಮಾದೇವ ಅವರು ತನಿಖೆಯನ್ನು ಮುಂದುವರೆಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…