ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ ದೊರೆತಿದ್ದು, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ ₹1,200 ಕೋಟಿ ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಟೊಯೋಟಾ ಕಂಪನಿಯ ಸಿಒಒ ಮತ್ತು ವಿಶೇಷ ಯೋಜನೆಗಳ ನಿರ್ದೇಶಕ ಸುದೀಪ್ ದಳವಿ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಯೋಜನೆಯಡಿ ಟೊಯೋಟಾ ಕಂಪನಿ ಕ್ವಿನ್ ಸಿಟಿಯಲ್ಲಿ ಜಾಗತಿಕ ಮಟ್ಟದ ‘ಬಿಝ್‌ಇಂಟೆಲ್ ಹಬ್’ ಸ್ಥಾಪಿಸಲಿದೆ. ಮುಂದಿನ ಐದು ವರ್ಷಗಳಲ್ಲಿ ₹1,200 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 200 ಮಂದಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.

ಇಲ್ಲಿ ವಾಹನಗಳ ತಯಾರಿಕೆ, ಪರೀಕ್ಷೆ ಹಾಗೂ ಆಧುನಿಕ ವಾಹನ ತಯಾರಿಕಾ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಸ್ಥಾವರಗಳನ್ನು ಆರಂಭಿಸಲು ಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಹೂಡಿಕೆ ಮಾಡಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. “ಈ ರೀತಿಯ ಜಾಗತಿಕ ಮಟ್ಟದ ಘಟಕ ಸ್ಥಾಪನೆಯಾಗುತ್ತಿರುವುದು ವಿಶ್ವದಲ್ಲೇ ಮೊದಲ ಪ್ರಯತ್ನ ಎನ್ನುವುದು ಸಂತಸದ ಸಂಗತಿ” ಎಂದು ಹೇಳಿದರು.

ಕ್ವಿನ್ ಸಿಟಿಯಲ್ಲಿ ಹೂಡಿಕೆ ಮಾಡಲು ಈಗಾಗಲೇ ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು, ಆರೋಗ್ಯ ಸಂಸ್ಥೆಗಳು ಹಾಗೂ ಸಂಶೋಧನಾ ಸಂಸ್ಥೆಗಳು ಆಸಕ್ತಿ ತೋರಿದ್ದು, ಅವುಗಳೊಂದಿಗೆ ಕೂಡ ಶೀಘ್ರದಲ್ಲೇ ಒಡಂಬಡಿಕೆಗಳಿಗೆ ಅಂತಿಮ ರೂಪ ನೀಡಲಾಗುವುದು ಎಂದು ತಿಳಿಸಲಾಗಿದೆ.

ಒಟ್ಟು 5,800 ಎಕರೆಯಲ್ಲಿ ಹಂತಹಂತವಾಗಿ ನಿರ್ಮಾಣವಾಗಲಿರುವ ಕ್ವಿನ್ ಸಿಟಿ ಯೋಜನೆಯ ಮೊದಲ ಹಂತದ ಅಭಿವೃದ್ಧಿ ಕಾರ್ಯಗಳು ಈಗಾಗಲೇ ಪ್ರಗತಿಯಲ್ಲಿವೆ. ಯೋಜನೆಗೆ ಒಟ್ಟು ₹48 ಸಾವಿರ ಕೋಟಿ ಹೂಡಿಕೆ ಆಗಲಿದ್ದು, ಸುಮಾರು 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬೂ ಗೋಯೆಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಟೊಯೋಟಾ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಯೋಶಿನೋರಿ ನೋರಿಟಾಕೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 hour ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

12 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

12 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

15 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

18 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

20 hours ago