ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ ದೊರೆತಿದ್ದು, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ ₹1,200 ಕೋಟಿ ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಟೊಯೋಟಾ ಕಂಪನಿಯ ಸಿಒಒ ಮತ್ತು ವಿಶೇಷ ಯೋಜನೆಗಳ ನಿರ್ದೇಶಕ ಸುದೀಪ್ ದಳವಿ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಯೋಜನೆಯಡಿ ಟೊಯೋಟಾ ಕಂಪನಿ ಕ್ವಿನ್ ಸಿಟಿಯಲ್ಲಿ ಜಾಗತಿಕ ಮಟ್ಟದ ‘ಬಿಝ್‌ಇಂಟೆಲ್ ಹಬ್’ ಸ್ಥಾಪಿಸಲಿದೆ. ಮುಂದಿನ ಐದು ವರ್ಷಗಳಲ್ಲಿ ₹1,200 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 200 ಮಂದಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.

ಇಲ್ಲಿ ವಾಹನಗಳ ತಯಾರಿಕೆ, ಪರೀಕ್ಷೆ ಹಾಗೂ ಆಧುನಿಕ ವಾಹನ ತಯಾರಿಕಾ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಸ್ಥಾವರಗಳನ್ನು ಆರಂಭಿಸಲು ಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಹೂಡಿಕೆ ಮಾಡಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. “ಈ ರೀತಿಯ ಜಾಗತಿಕ ಮಟ್ಟದ ಘಟಕ ಸ್ಥಾಪನೆಯಾಗುತ್ತಿರುವುದು ವಿಶ್ವದಲ್ಲೇ ಮೊದಲ ಪ್ರಯತ್ನ ಎನ್ನುವುದು ಸಂತಸದ ಸಂಗತಿ” ಎಂದು ಹೇಳಿದರು.

ಕ್ವಿನ್ ಸಿಟಿಯಲ್ಲಿ ಹೂಡಿಕೆ ಮಾಡಲು ಈಗಾಗಲೇ ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು, ಆರೋಗ್ಯ ಸಂಸ್ಥೆಗಳು ಹಾಗೂ ಸಂಶೋಧನಾ ಸಂಸ್ಥೆಗಳು ಆಸಕ್ತಿ ತೋರಿದ್ದು, ಅವುಗಳೊಂದಿಗೆ ಕೂಡ ಶೀಘ್ರದಲ್ಲೇ ಒಡಂಬಡಿಕೆಗಳಿಗೆ ಅಂತಿಮ ರೂಪ ನೀಡಲಾಗುವುದು ಎಂದು ತಿಳಿಸಲಾಗಿದೆ.

ಒಟ್ಟು 5,800 ಎಕರೆಯಲ್ಲಿ ಹಂತಹಂತವಾಗಿ ನಿರ್ಮಾಣವಾಗಲಿರುವ ಕ್ವಿನ್ ಸಿಟಿ ಯೋಜನೆಯ ಮೊದಲ ಹಂತದ ಅಭಿವೃದ್ಧಿ ಕಾರ್ಯಗಳು ಈಗಾಗಲೇ ಪ್ರಗತಿಯಲ್ಲಿವೆ. ಯೋಜನೆಗೆ ಒಟ್ಟು ₹48 ಸಾವಿರ ಕೋಟಿ ಹೂಡಿಕೆ ಆಗಲಿದ್ದು, ಸುಮಾರು 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬೂ ಗೋಯೆಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಟೊಯೋಟಾ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಯೋಶಿನೋರಿ ನೋರಿಟಾಕೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

7 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

9 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

22 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

1 day ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

1 day ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago