ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ ದೊರೆತಿದ್ದು, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ ₹1,200 ಕೋಟಿ ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಟೊಯೋಟಾ ಕಂಪನಿಯ ಸಿಒಒ ಮತ್ತು ವಿಶೇಷ ಯೋಜನೆಗಳ ನಿರ್ದೇಶಕ ಸುದೀಪ್ ದಳವಿ ಒಪ್ಪಂದಕ್ಕೆ ಸಹಿ ಹಾಕಿದರು.
ಈ ಯೋಜನೆಯಡಿ ಟೊಯೋಟಾ ಕಂಪನಿ ಕ್ವಿನ್ ಸಿಟಿಯಲ್ಲಿ ಜಾಗತಿಕ ಮಟ್ಟದ ‘ಬಿಝ್ಇಂಟೆಲ್ ಹಬ್’ ಸ್ಥಾಪಿಸಲಿದೆ. ಮುಂದಿನ ಐದು ವರ್ಷಗಳಲ್ಲಿ ₹1,200 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 200 ಮಂದಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.
ಇಲ್ಲಿ ವಾಹನಗಳ ತಯಾರಿಕೆ, ಪರೀಕ್ಷೆ ಹಾಗೂ ಆಧುನಿಕ ವಾಹನ ತಯಾರಿಕಾ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಸ್ಥಾವರಗಳನ್ನು ಆರಂಭಿಸಲು ಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಹೂಡಿಕೆ ಮಾಡಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. “ಈ ರೀತಿಯ ಜಾಗತಿಕ ಮಟ್ಟದ ಘಟಕ ಸ್ಥಾಪನೆಯಾಗುತ್ತಿರುವುದು ವಿಶ್ವದಲ್ಲೇ ಮೊದಲ ಪ್ರಯತ್ನ ಎನ್ನುವುದು ಸಂತಸದ ಸಂಗತಿ” ಎಂದು ಹೇಳಿದರು.
ಕ್ವಿನ್ ಸಿಟಿಯಲ್ಲಿ ಹೂಡಿಕೆ ಮಾಡಲು ಈಗಾಗಲೇ ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು, ಆರೋಗ್ಯ ಸಂಸ್ಥೆಗಳು ಹಾಗೂ ಸಂಶೋಧನಾ ಸಂಸ್ಥೆಗಳು ಆಸಕ್ತಿ ತೋರಿದ್ದು, ಅವುಗಳೊಂದಿಗೆ ಕೂಡ ಶೀಘ್ರದಲ್ಲೇ ಒಡಂಬಡಿಕೆಗಳಿಗೆ ಅಂತಿಮ ರೂಪ ನೀಡಲಾಗುವುದು ಎಂದು ತಿಳಿಸಲಾಗಿದೆ.
ಒಟ್ಟು 5,800 ಎಕರೆಯಲ್ಲಿ ಹಂತಹಂತವಾಗಿ ನಿರ್ಮಾಣವಾಗಲಿರುವ ಕ್ವಿನ್ ಸಿಟಿ ಯೋಜನೆಯ ಮೊದಲ ಹಂತದ ಅಭಿವೃದ್ಧಿ ಕಾರ್ಯಗಳು ಈಗಾಗಲೇ ಪ್ರಗತಿಯಲ್ಲಿವೆ. ಯೋಜನೆಗೆ ಒಟ್ಟು ₹48 ಸಾವಿರ ಕೋಟಿ ಹೂಡಿಕೆ ಆಗಲಿದ್ದು, ಸುಮಾರು 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.
ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬೂ ಗೋಯೆಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಟೊಯೋಟಾ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಯೋಶಿನೋರಿ ನೋರಿಟಾಕೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…