Categories: ಕೋಲಾರ

ಮಹನೀಯರ ಹಾದಿಯಲ್ಲಿ ಒಗ್ಗಟ್ಟಿನಿಂದ ಭವ್ಯ ಭಾರತ ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ್ ಕರೆ

ಕೋಲಾರ: ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಬಾರದು ಗಾಂಧಿಯವರ ಅಹಿಂಸ ಮಾರ್ಗದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ನಗರದ ಗಾಂಧಿವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿಯವರು ಅಹಿಂಸೆಯ ಮಾರ್ಗದಲ್ಲಿ ದೇಶಾದ್ಯಂತ ಲಕ್ಷಾಂತರ ಜನರನ್ನು ಒಗ್ಗೂಡಿಸಿ ಹೋರಾಟದ ಮಂತ್ರದ ಮೂಲಕವೇ ಉಪವಾಸ ಸತ್ಯಾಗ್ರಹ ಮಾಡಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದ ಹೋರಾಡಿದ್ದಾರೆ. ಅವರ ತ್ಯಾಗ ಬಲಿದಾನದ ಪ್ರತೀಕ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದಾರೆ. ಅದು ಪ್ರಸ್ತುತ ದಿನಗಳಲ್ಲಿ ಸದುಪಯೋಗವಾಗಬೇಕು ಎಂದು ಅಭಿಪ್ರಾಯ ಪಟ್ಟರು,

ದೇಶದಲ್ಲಿ ಗಾಂಧೀಜಿಯವರ ಹಾದಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರನ್ನು ಸಹ ನೆನೆಯಬೇಕಾಗಿದೆ ಭಾರತ ದೇಶವು ವಿವಿಧ ಭಾಷೆ ಸಂಸ್ಕೃತಿಗಳಿಂದ ಬೆಳೆದಿದೆ ದೇಶಕ್ಕಾಗಿ ಪ್ರತಿ ಹಂತದಲ್ಲೂ ಕೊಡುಗೆ ಕೊಟ್ಟ ಅಂತಹ ಮಹನೀಯರ ಮಾರ್ಗದರ್ಶನದಲ್ಲಿ ಯುವ ಪೀಳಿಗೆ ನಡೆಯಬೇಕು ಜೊತೆಗೆ ಯವ ಜನತೆಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿ ಹೇಳಬೇಕಾಗಿದೆ ಎಂದರು.

ದೇಶದಲ್ಲಿ ನಾವು ಎಲ್ಲರೂ ಅಣ್ಣತಮ್ಮಂದಿರ ರೀತಿಯಲ್ಲಿ ಬದುಕಬೇಕು ಸಣ್ಣಪುಟ್ಟ ಜಗಳಗಳು ಸಹಜವಾಗಿದ್ದು ಅವುಗಳನ್ನು ಸರಿಪಡಿಸಿಕೊಂಡು ಹೋಗಬೇಕು ಸಮಸ್ಯೆಗಳು ಇದ್ದರೆ ಪರಿಹಾರ ಮಾಡಿಕೊಳ್ಳೋಣ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದು ಒಳ್ಳೆಯ ಜನಪರ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದು ಅವರ ಬೆಂಬಲವಾಗಿ ನಿಲ್ಲಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಾಂಧಿವನದವರೆಗೂ ಕಾಲ್ನಡಿಗೆ ಜಾಥಾ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಜಯದೇವ್ ನಾಗರಾಜ್, ಮೈಲಾಂಡಹಳ್ಳಿ ಮುರಳಿ, ಮೀನುಗಾರಿಕೆ ರಂಗನಾಥ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ಹೊನ್ನೇನಹಳ್ಳಿ ಯಲ್ಲಪ್ಪ, ಮುಂತಾದವರು ಇದ್ದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

8 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

12 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

20 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

23 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

1 day ago