ಕೋಲಾರ: ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಬಾರದು ಗಾಂಧಿಯವರ ಅಹಿಂಸ ಮಾರ್ಗದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.
ನಗರದ ಗಾಂಧಿವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿಯವರು ಅಹಿಂಸೆಯ ಮಾರ್ಗದಲ್ಲಿ ದೇಶಾದ್ಯಂತ ಲಕ್ಷಾಂತರ ಜನರನ್ನು ಒಗ್ಗೂಡಿಸಿ ಹೋರಾಟದ ಮಂತ್ರದ ಮೂಲಕವೇ ಉಪವಾಸ ಸತ್ಯಾಗ್ರಹ ಮಾಡಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದ ಹೋರಾಡಿದ್ದಾರೆ. ಅವರ ತ್ಯಾಗ ಬಲಿದಾನದ ಪ್ರತೀಕ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದಾರೆ. ಅದು ಪ್ರಸ್ತುತ ದಿನಗಳಲ್ಲಿ ಸದುಪಯೋಗವಾಗಬೇಕು ಎಂದು ಅಭಿಪ್ರಾಯ ಪಟ್ಟರು,
ದೇಶದಲ್ಲಿ ಗಾಂಧೀಜಿಯವರ ಹಾದಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರನ್ನು ಸಹ ನೆನೆಯಬೇಕಾಗಿದೆ ಭಾರತ ದೇಶವು ವಿವಿಧ ಭಾಷೆ ಸಂಸ್ಕೃತಿಗಳಿಂದ ಬೆಳೆದಿದೆ ದೇಶಕ್ಕಾಗಿ ಪ್ರತಿ ಹಂತದಲ್ಲೂ ಕೊಡುಗೆ ಕೊಟ್ಟ ಅಂತಹ ಮಹನೀಯರ ಮಾರ್ಗದರ್ಶನದಲ್ಲಿ ಯುವ ಪೀಳಿಗೆ ನಡೆಯಬೇಕು ಜೊತೆಗೆ ಯವ ಜನತೆಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿ ಹೇಳಬೇಕಾಗಿದೆ ಎಂದರು.
ದೇಶದಲ್ಲಿ ನಾವು ಎಲ್ಲರೂ ಅಣ್ಣತಮ್ಮಂದಿರ ರೀತಿಯಲ್ಲಿ ಬದುಕಬೇಕು ಸಣ್ಣಪುಟ್ಟ ಜಗಳಗಳು ಸಹಜವಾಗಿದ್ದು ಅವುಗಳನ್ನು ಸರಿಪಡಿಸಿಕೊಂಡು ಹೋಗಬೇಕು ಸಮಸ್ಯೆಗಳು ಇದ್ದರೆ ಪರಿಹಾರ ಮಾಡಿಕೊಳ್ಳೋಣ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದು ಒಳ್ಳೆಯ ಜನಪರ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದು ಅವರ ಬೆಂಬಲವಾಗಿ ನಿಲ್ಲಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಾಂಧಿವನದವರೆಗೂ ಕಾಲ್ನಡಿಗೆ ಜಾಥಾ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಜಯದೇವ್ ನಾಗರಾಜ್, ಮೈಲಾಂಡಹಳ್ಳಿ ಮುರಳಿ, ಮೀನುಗಾರಿಕೆ ರಂಗನಾಥ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ಹೊನ್ನೇನಹಳ್ಳಿ ಯಲ್ಲಪ್ಪ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…