Categories: ಕೋಲಾರ

ಮಹನೀಯರ ಹಾದಿಯಲ್ಲಿ ಒಗ್ಗಟ್ಟಿನಿಂದ ಭವ್ಯ ಭಾರತ ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ್ ಕರೆ

ಕೋಲಾರ: ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಬಾರದು ಗಾಂಧಿಯವರ ಅಹಿಂಸ ಮಾರ್ಗದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ನಗರದ ಗಾಂಧಿವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿಯವರು ಅಹಿಂಸೆಯ ಮಾರ್ಗದಲ್ಲಿ ದೇಶಾದ್ಯಂತ ಲಕ್ಷಾಂತರ ಜನರನ್ನು ಒಗ್ಗೂಡಿಸಿ ಹೋರಾಟದ ಮಂತ್ರದ ಮೂಲಕವೇ ಉಪವಾಸ ಸತ್ಯಾಗ್ರಹ ಮಾಡಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದ ಹೋರಾಡಿದ್ದಾರೆ. ಅವರ ತ್ಯಾಗ ಬಲಿದಾನದ ಪ್ರತೀಕ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದಾರೆ. ಅದು ಪ್ರಸ್ತುತ ದಿನಗಳಲ್ಲಿ ಸದುಪಯೋಗವಾಗಬೇಕು ಎಂದು ಅಭಿಪ್ರಾಯ ಪಟ್ಟರು,

ದೇಶದಲ್ಲಿ ಗಾಂಧೀಜಿಯವರ ಹಾದಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರನ್ನು ಸಹ ನೆನೆಯಬೇಕಾಗಿದೆ ಭಾರತ ದೇಶವು ವಿವಿಧ ಭಾಷೆ ಸಂಸ್ಕೃತಿಗಳಿಂದ ಬೆಳೆದಿದೆ ದೇಶಕ್ಕಾಗಿ ಪ್ರತಿ ಹಂತದಲ್ಲೂ ಕೊಡುಗೆ ಕೊಟ್ಟ ಅಂತಹ ಮಹನೀಯರ ಮಾರ್ಗದರ್ಶನದಲ್ಲಿ ಯುವ ಪೀಳಿಗೆ ನಡೆಯಬೇಕು ಜೊತೆಗೆ ಯವ ಜನತೆಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿ ಹೇಳಬೇಕಾಗಿದೆ ಎಂದರು.

ದೇಶದಲ್ಲಿ ನಾವು ಎಲ್ಲರೂ ಅಣ್ಣತಮ್ಮಂದಿರ ರೀತಿಯಲ್ಲಿ ಬದುಕಬೇಕು ಸಣ್ಣಪುಟ್ಟ ಜಗಳಗಳು ಸಹಜವಾಗಿದ್ದು ಅವುಗಳನ್ನು ಸರಿಪಡಿಸಿಕೊಂಡು ಹೋಗಬೇಕು ಸಮಸ್ಯೆಗಳು ಇದ್ದರೆ ಪರಿಹಾರ ಮಾಡಿಕೊಳ್ಳೋಣ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದು ಒಳ್ಳೆಯ ಜನಪರ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದು ಅವರ ಬೆಂಬಲವಾಗಿ ನಿಲ್ಲಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಾಂಧಿವನದವರೆಗೂ ಕಾಲ್ನಡಿಗೆ ಜಾಥಾ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಜಯದೇವ್ ನಾಗರಾಜ್, ಮೈಲಾಂಡಹಳ್ಳಿ ಮುರಳಿ, ಮೀನುಗಾರಿಕೆ ರಂಗನಾಥ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ಹೊನ್ನೇನಹಳ್ಳಿ ಯಲ್ಲಪ್ಪ, ಮುಂತಾದವರು ಇದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

53 minutes ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

2 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

5 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

11 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

22 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago