ಕೋಲಾರ: ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಬಾರದು ಗಾಂಧಿಯವರ ಅಹಿಂಸ ಮಾರ್ಗದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.
ನಗರದ ಗಾಂಧಿವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿಯವರು ಅಹಿಂಸೆಯ ಮಾರ್ಗದಲ್ಲಿ ದೇಶಾದ್ಯಂತ ಲಕ್ಷಾಂತರ ಜನರನ್ನು ಒಗ್ಗೂಡಿಸಿ ಹೋರಾಟದ ಮಂತ್ರದ ಮೂಲಕವೇ ಉಪವಾಸ ಸತ್ಯಾಗ್ರಹ ಮಾಡಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದ ಹೋರಾಡಿದ್ದಾರೆ. ಅವರ ತ್ಯಾಗ ಬಲಿದಾನದ ಪ್ರತೀಕ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದಾರೆ. ಅದು ಪ್ರಸ್ತುತ ದಿನಗಳಲ್ಲಿ ಸದುಪಯೋಗವಾಗಬೇಕು ಎಂದು ಅಭಿಪ್ರಾಯ ಪಟ್ಟರು,
ದೇಶದಲ್ಲಿ ಗಾಂಧೀಜಿಯವರ ಹಾದಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರನ್ನು ಸಹ ನೆನೆಯಬೇಕಾಗಿದೆ ಭಾರತ ದೇಶವು ವಿವಿಧ ಭಾಷೆ ಸಂಸ್ಕೃತಿಗಳಿಂದ ಬೆಳೆದಿದೆ ದೇಶಕ್ಕಾಗಿ ಪ್ರತಿ ಹಂತದಲ್ಲೂ ಕೊಡುಗೆ ಕೊಟ್ಟ ಅಂತಹ ಮಹನೀಯರ ಮಾರ್ಗದರ್ಶನದಲ್ಲಿ ಯುವ ಪೀಳಿಗೆ ನಡೆಯಬೇಕು ಜೊತೆಗೆ ಯವ ಜನತೆಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿ ಹೇಳಬೇಕಾಗಿದೆ ಎಂದರು.
ದೇಶದಲ್ಲಿ ನಾವು ಎಲ್ಲರೂ ಅಣ್ಣತಮ್ಮಂದಿರ ರೀತಿಯಲ್ಲಿ ಬದುಕಬೇಕು ಸಣ್ಣಪುಟ್ಟ ಜಗಳಗಳು ಸಹಜವಾಗಿದ್ದು ಅವುಗಳನ್ನು ಸರಿಪಡಿಸಿಕೊಂಡು ಹೋಗಬೇಕು ಸಮಸ್ಯೆಗಳು ಇದ್ದರೆ ಪರಿಹಾರ ಮಾಡಿಕೊಳ್ಳೋಣ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದು ಒಳ್ಳೆಯ ಜನಪರ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದು ಅವರ ಬೆಂಬಲವಾಗಿ ನಿಲ್ಲಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಾಂಧಿವನದವರೆಗೂ ಕಾಲ್ನಡಿಗೆ ಜಾಥಾ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಜಯದೇವ್ ನಾಗರಾಜ್, ಮೈಲಾಂಡಹಳ್ಳಿ ಮುರಳಿ, ಮೀನುಗಾರಿಕೆ ರಂಗನಾಥ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ಹೊನ್ನೇನಹಳ್ಳಿ ಯಲ್ಲಪ್ಪ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…