ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಎಲ್ಲರ ಸಹಕಾರ ಅಗತ್ಯ – ಶಾಸಕ‌ ಧೀರಜ್ ಮುನಿರಾಜ್

ಮಹರ್ಷಿ ವಾಲ್ಮೀಕಿ ಜಯಂತಿ ಯಾವುದೋ ಒಂದು ವರ್ಗ ಅಥವಾ ಪಕ್ಷಕ್ಕೆ ಸೀಮಿತಗೊಳಿಸದೆ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿ ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರಲಿದೆ ಎಂದರು.

ರಾಮಾಯಣ ಮಹಾಭಾರತ ಕಾವ್ಯಗಳನ್ನು ಮಕ್ಕಳು ಓದಬೇಕು. ಅದೇರೀತಿ ಎಲ್ಲಾ ಧರ್ಮಗಳ ಜನರು ಓದುವಂತಹ ಪುಸ್ತಕಗಳು ರಾಮಾಯಣ ಹಾಗೂ ಮಹಾಭಾರತ. ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದರು.

ಸಮುದಾಯದ ಹಿರಿಯ ಮುಖಂಡ ಮುನಿಕೃಷ್ಣಪ್ಪ ಮಾತಾಡಿ, ಸ್ತ್ರೀ-ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿ ಬೋಧಿಸಿದ್ದು, ಪ್ರತಿಯೊಬ್ಬರೂ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಇದೇ ಅಕ್ಟೋಬರ್ 17ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಮುದಾಯದ ಮುಖಂಡರು ಶ್ರಮಿಸಬೇಕು ಎಂದರು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಈ ಹಿಂದಿನಂತೆ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ವಾಲ್ಮೀಕಿ ಜಯಂತಿಯಂದು ನಗರದ ಪ್ರಮುಖ ರಸ್ತೆಗಳಲ್ಲಿ  ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಪಲ್ಲಕ್ಕಿ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇರ್ಶಕ ಉಮಾಪತಿ, ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್  ಕುಮಾರ್, ಮುಖಂಡರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago