ಮಹರ್ಷಿ ವಾಲ್ಮೀಕಿ ಜಯಂತಿ ಯಾವುದೋ ಒಂದು ವರ್ಗ ಅಥವಾ ಪಕ್ಷಕ್ಕೆ ಸೀಮಿತಗೊಳಿಸದೆ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿ ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರಲಿದೆ ಎಂದರು.
ರಾಮಾಯಣ ಮಹಾಭಾರತ ಕಾವ್ಯಗಳನ್ನು ಮಕ್ಕಳು ಓದಬೇಕು. ಅದೇರೀತಿ ಎಲ್ಲಾ ಧರ್ಮಗಳ ಜನರು ಓದುವಂತಹ ಪುಸ್ತಕಗಳು ರಾಮಾಯಣ ಹಾಗೂ ಮಹಾಭಾರತ. ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದರು.
ಸಮುದಾಯದ ಹಿರಿಯ ಮುಖಂಡ ಮುನಿಕೃಷ್ಣಪ್ಪ ಮಾತಾಡಿ, ಸ್ತ್ರೀ-ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿ ಬೋಧಿಸಿದ್ದು, ಪ್ರತಿಯೊಬ್ಬರೂ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಇದೇ ಅಕ್ಟೋಬರ್ 17ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಮುದಾಯದ ಮುಖಂಡರು ಶ್ರಮಿಸಬೇಕು ಎಂದರು.
ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಈ ಹಿಂದಿನಂತೆ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ವಾಲ್ಮೀಕಿ ಜಯಂತಿಯಂದು ನಗರದ ಪ್ರಮುಖ ರಸ್ತೆಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಪಲ್ಲಕ್ಕಿ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇರ್ಶಕ ಉಮಾಪತಿ, ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್ ಕುಮಾರ್, ಮುಖಂಡರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…