ಕೋಲಾರ: ನಗರದ ವಾಲ್ಮೀಕಿ ವೃತ್ತದಲ್ಲಿರುವ ವಾಲ್ಮೀಕಿ ಸಮುದಾಯದ ಭವನದಲ್ಲಿ ಆದಿ ಕವಿ, ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಸಮುದಾಯದ ಮುಖಂಡರು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹಿರಿಯ ಮುಖಂಡ ನರಸಿಂಹಯ್ಯ, ಜೀವನದಿಂದ ಸಾಮಾನ್ಯ ವ್ಯಕ್ತಿಯೊಬ್ಬ ಉತ್ತಮ ವ್ಯಕ್ತಿಯಾಗಿ ಬದಲಾಗಬಹುದು ಎನ್ನುವುದಕ್ಕೆ ಮಹರ್ಷಿ ವಾಲ್ಮೀಕಿ ಉದಾಹರಣೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ ಎಂದರು.
ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲದಲ್ಲಿಯೂ ಅವರು ಭಾರತದಲ್ಲಿ ಇಂತಹ ಜಾಗ ಇಂತಹಲ್ಲಿಯೇ ಇದೆ ಎಂದು ಕಾವ್ಯದಲ್ಲಿ ಹೆಸರಿಸಿದ್ದಾರೆ. ಮಹರ್ಷಿ ವಾಲ್ಮೀಕಿಯವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ತಿಳಿಸಿದರು.
ಮುಖಂಡ ಕುವೆಂಪು ನಗರ ಆನಂದ್ ಮಾತನಾಡಿ, ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಕೃತಿಯನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ನಮ್ಮ ಆಚಾರ ವಿಚಾರ, ಸಂಸ್ಕೃತಿ, ನಡೆ ನುಡಿಗಳು ರಾಮಾಯಣದಲ್ಲಿದೆ ಎಂದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ಕೆಎಸ್ಆರ್ಟಿಸಿ ಮುನಿಯಪ್ಪ, ಕೋದಂಡಪ್ಪ, ನಾಗರಾಜು, ನವೀನ್, ತಿಮ್ಮರಾಯಪ್ಪ, ರಾಜಣ್ಣ, ರವಿ ಮತ್ತಿತರರು ಹಾಜರಿದ್ದರು.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…