Categories: ಕೋಲಾರ

ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ- ನರಸಿಂಹಯ್ಯ

ಕೋಲಾರ: ನಗರದ ವಾಲ್ಮೀಕಿ ವೃತ್ತದಲ್ಲಿರುವ ವಾಲ್ಮೀಕಿ ಸಮುದಾಯದ ಭವನದಲ್ಲಿ ಆದಿ ಕವಿ, ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಸಮುದಾಯದ ಮುಖಂಡರು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಹಿರಿಯ ಮುಖಂಡ ನರಸಿಂಹಯ್ಯ, ಜೀವನದಿಂದ ಸಾಮಾನ್ಯ ವ್ಯಕ್ತಿಯೊಬ್ಬ ಉತ್ತಮ ವ್ಯಕ್ತಿಯಾಗಿ ಬದಲಾಗಬಹುದು ಎನ್ನುವುದಕ್ಕೆ ಮಹರ್ಷಿ ವಾಲ್ಮೀಕಿ ಉದಾಹರಣೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ ಎಂದರು.

ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲದಲ್ಲಿಯೂ ಅವರು ಭಾರತದಲ್ಲಿ ಇಂತಹ ಜಾಗ ಇಂತಹಲ್ಲಿಯೇ ಇದೆ ಎಂದು ಕಾವ್ಯದಲ್ಲಿ ಹೆಸರಿಸಿದ್ದಾರೆ. ಮಹರ್ಷಿ ವಾಲ್ಮೀಕಿಯವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ತಿಳಿಸಿದರು.

ಮುಖಂಡ ಕುವೆಂಪು ನಗರ ಆನಂದ್ ಮಾತನಾಡಿ, ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಕೃತಿಯನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ನಮ್ಮ ಆಚಾರ ವಿಚಾರ, ಸಂಸ್ಕೃತಿ, ನಡೆ ನುಡಿಗಳು ರಾಮಾಯಣದಲ್ಲಿದೆ ಎಂದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ಕೆಎಸ್‌ಆರ್‌ಟಿಸಿ ಮುನಿಯಪ್ಪ, ಕೋದಂಡಪ್ಪ, ನಾಗರಾಜು, ನವೀನ್, ತಿಮ್ಮರಾಯಪ್ಪ, ರಾಜಣ್ಣ, ರವಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

4 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

16 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

17 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

18 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

18 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago