ಕೋಲಾರ: ನಗರದ ವಾಲ್ಮೀಕಿ ವೃತ್ತದಲ್ಲಿರುವ ವಾಲ್ಮೀಕಿ ಸಮುದಾಯದ ಭವನದಲ್ಲಿ ಆದಿ ಕವಿ, ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಸಮುದಾಯದ ಮುಖಂಡರು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹಿರಿಯ ಮುಖಂಡ ನರಸಿಂಹಯ್ಯ, ಜೀವನದಿಂದ ಸಾಮಾನ್ಯ ವ್ಯಕ್ತಿಯೊಬ್ಬ ಉತ್ತಮ ವ್ಯಕ್ತಿಯಾಗಿ ಬದಲಾಗಬಹುದು ಎನ್ನುವುದಕ್ಕೆ ಮಹರ್ಷಿ ವಾಲ್ಮೀಕಿ ಉದಾಹರಣೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ ಎಂದರು.
ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲದಲ್ಲಿಯೂ ಅವರು ಭಾರತದಲ್ಲಿ ಇಂತಹ ಜಾಗ ಇಂತಹಲ್ಲಿಯೇ ಇದೆ ಎಂದು ಕಾವ್ಯದಲ್ಲಿ ಹೆಸರಿಸಿದ್ದಾರೆ. ಮಹರ್ಷಿ ವಾಲ್ಮೀಕಿಯವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ತಿಳಿಸಿದರು.
ಮುಖಂಡ ಕುವೆಂಪು ನಗರ ಆನಂದ್ ಮಾತನಾಡಿ, ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಕೃತಿಯನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ನಮ್ಮ ಆಚಾರ ವಿಚಾರ, ಸಂಸ್ಕೃತಿ, ನಡೆ ನುಡಿಗಳು ರಾಮಾಯಣದಲ್ಲಿದೆ ಎಂದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ಕೆಎಸ್ಆರ್ಟಿಸಿ ಮುನಿಯಪ್ಪ, ಕೋದಂಡಪ್ಪ, ನಾಗರಾಜು, ನವೀನ್, ತಿಮ್ಮರಾಯಪ್ಪ, ರಾಜಣ್ಣ, ರವಿ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…