Categories: ಕೋಲಾರ

ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ- ನರಸಿಂಹಯ್ಯ

ಕೋಲಾರ: ನಗರದ ವಾಲ್ಮೀಕಿ ವೃತ್ತದಲ್ಲಿರುವ ವಾಲ್ಮೀಕಿ ಸಮುದಾಯದ ಭವನದಲ್ಲಿ ಆದಿ ಕವಿ, ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಸಮುದಾಯದ ಮುಖಂಡರು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಹಿರಿಯ ಮುಖಂಡ ನರಸಿಂಹಯ್ಯ, ಜೀವನದಿಂದ ಸಾಮಾನ್ಯ ವ್ಯಕ್ತಿಯೊಬ್ಬ ಉತ್ತಮ ವ್ಯಕ್ತಿಯಾಗಿ ಬದಲಾಗಬಹುದು ಎನ್ನುವುದಕ್ಕೆ ಮಹರ್ಷಿ ವಾಲ್ಮೀಕಿ ಉದಾಹರಣೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ ಎಂದರು.

ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲದಲ್ಲಿಯೂ ಅವರು ಭಾರತದಲ್ಲಿ ಇಂತಹ ಜಾಗ ಇಂತಹಲ್ಲಿಯೇ ಇದೆ ಎಂದು ಕಾವ್ಯದಲ್ಲಿ ಹೆಸರಿಸಿದ್ದಾರೆ. ಮಹರ್ಷಿ ವಾಲ್ಮೀಕಿಯವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ತಿಳಿಸಿದರು.

ಮುಖಂಡ ಕುವೆಂಪು ನಗರ ಆನಂದ್ ಮಾತನಾಡಿ, ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಕೃತಿಯನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ನಮ್ಮ ಆಚಾರ ವಿಚಾರ, ಸಂಸ್ಕೃತಿ, ನಡೆ ನುಡಿಗಳು ರಾಮಾಯಣದಲ್ಲಿದೆ ಎಂದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ಕೆಎಸ್‌ಆರ್‌ಟಿಸಿ ಮುನಿಯಪ್ಪ, ಕೋದಂಡಪ್ಪ, ನಾಗರಾಜು, ನವೀನ್, ತಿಮ್ಮರಾಯಪ್ಪ, ರಾಜಣ್ಣ, ರವಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago