ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಜನವರಿ 13 ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ಜರುಗಲಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಪ್ರಮುಖ ಕುಂಭ ಸ್ನಾನದ ದಿನಾಂಕ
ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ
ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಅಮೃತ(ಶಾಹಿ) ಸ್ನಾನ
ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ
ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನ
ಫೆಬ್ರವರಿ 26, 2025ರಂದು ಮಹಾ ಶಿವರಾತ್ರಿ ಹಾಗೂ ಮಹಾ ಕುಂಭಮೇಳಕ್ಕೆ ತೆರೆ
ಮೊದಲ ಅಮೃತ ಸ್ನಾನ (ಶಾಹಿ ಸ್ನಾನ)ದಲ್ಲಿ ಬಹುತೇಕ ಎಲ್ಲಾ ಅಖಾಡಗಳ ಸಾಧುಗಳು ಪಾಲ್ಗೊಂಡಿದ್ದರು. ಪ್ರತಿಯೊಂದು ಅಖಾಡದ ಸಾಧುಗಳು ಅವರ ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾಕುಂಭದ ಮೊದಲ ದಿನ 1.75 ಕೋಟಿ ಮತ್ತು ಎರಡನೇ ದಿನ 3.5 ಕೋಟಿ ಸೇರಿ ಒಟ್ಟು 5.25 ಕೋಟಿ ಜನರು ಎರಡು ದಿನದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಪಾಲ್ಗೊಂಡಿರುವ ಭಕ್ತರ ಮೇಲೆ ಉತ್ತರ ಪ್ರದೇಶ ಸರ್ಕಾರ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದೆ. ಅಮೃತಸ್ನಾನ ಮಾಡುವ ಭಕ್ತರ ಮೇಲೆ ಪ್ರತಿ ದಿನ 20 ಕ್ವಿಂಟಾಲ್ ಗುಲಾಬಿ ಹೂವಿನ ದಳಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…