ಮಹಾಕುಂಭ ಮೇಳ: ಹಿಂದೂ ಧರ್ಮದಲ್ಲಿ ದೊಡ್ಡ ಮತ್ತು ಹೆಚ್ಚು ಪವಿತ್ರ ಉತ್ಸವ: ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರ ತ್ರಿವೇಣಿ ಸಂಗಮದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಉತ್ಸವ: 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ

ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಜನವರಿ 13 ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ಜರುಗಲಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಮೂರು ಮಹಾನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳದಲ್ಲಿ ಶಾಹಿ ಸ್ನಾನ ಮಾಡುವುದರಿಂದ ಜನರು ಮೋಕ್ಷವನ್ನು ಪಡೆಯುತ್ತಾರೆ ಎನ್ನುವ ನಂಬಿಕೆ ಇದೆ. ಹೀಗಾಗಿ ದೇಶದ ಮೂಲೆ ಮೂಲೆಯಿಂದ ಜನ ಮಹಾ ಕುಂಭಮೇಳಕ್ಕೆ ಆಗಮಿಸುತ್ತಾರೆ.

ಪ್ರಮುಖ ಕುಂಭ ಸ್ನಾನದ ದಿನಾಂಕ

ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ

ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಅಮೃತ(ಶಾಹಿ) ಸ್ನಾನ

ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ

ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನ

ಫೆಬ್ರವರಿ 26, 2025ರಂದು ಮಹಾ ಶಿವರಾತ್ರಿ ಹಾಗೂ ಮಹಾ ಕುಂಭಮೇಳಕ್ಕೆ ತೆರೆ

ಮಕರ ಸಂಕ್ರಾಂತಿ ಪ್ರಯುಕ್ತ ಮಹಾಕುಂಭ ಮೇಳದಲ್ಲಿ ಸಾಧು, ಸಂತರು ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡಿದ್ದರು. ಮಹಾಕುಂಭ ಮೇಳದ ಎರಡನೇ ದಿನ 3.5 ಕೋಟಿ ಭಕ್ತರು ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾಗಿದ್ದಾರೆ.

ಮೊದಲ ಅಮೃತ ಸ್ನಾನ (ಶಾಹಿ ಸ್ನಾನ)ದಲ್ಲಿ ಬಹುತೇಕ ಎಲ್ಲಾ ಅಖಾಡಗಳ ಸಾಧುಗಳು ಪಾಲ್ಗೊಂಡಿದ್ದರು. ಪ್ರತಿಯೊಂದು ಅಖಾಡದ ಸಾಧುಗಳು ಅವರ ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಮಹಾಕುಂಭದ ಮೊದಲ ದಿನ 1.75 ಕೋಟಿ ಮತ್ತು ಎರಡನೇ ದಿನ 3.5 ಕೋಟಿ ಸೇರಿ ಒಟ್ಟು 5.25 ಕೋಟಿ ಜನರು ಎರಡು ದಿನದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಭಕ್ತರ ಮೇಲೆ ಪುಷ್ಪವೃಷ್ಟಿ: ಮಹಾಕುಂಭ ಮೇಳದಲ್ಲಿ

ಪಾಲ್ಗೊಂಡಿರುವ ಭಕ್ತರ ಮೇಲೆ ಉತ್ತರ ಪ್ರದೇಶ ಸರ್ಕಾರ ಹೆಲಿಕಾಪ್ಟ‌ರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದೆ. ಅಮೃತಸ್ನಾನ ಮಾಡುವ ಭಕ್ತರ ಮೇಲೆ ಪ್ರತಿ ದಿನ 20 ಕ್ವಿಂಟಾಲ್ ಗುಲಾಬಿ ಹೂವಿನ ದಳಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

10 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

12 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

1 day ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

1 day ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago