ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಜನವರಿ 13 ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ಜರುಗಲಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಪ್ರಮುಖ ಕುಂಭ ಸ್ನಾನದ ದಿನಾಂಕ
ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ
ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಅಮೃತ(ಶಾಹಿ) ಸ್ನಾನ
ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ
ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನ
ಫೆಬ್ರವರಿ 26, 2025ರಂದು ಮಹಾ ಶಿವರಾತ್ರಿ ಹಾಗೂ ಮಹಾ ಕುಂಭಮೇಳಕ್ಕೆ ತೆರೆ
ಮೊದಲ ಅಮೃತ ಸ್ನಾನ (ಶಾಹಿ ಸ್ನಾನ)ದಲ್ಲಿ ಬಹುತೇಕ ಎಲ್ಲಾ ಅಖಾಡಗಳ ಸಾಧುಗಳು ಪಾಲ್ಗೊಂಡಿದ್ದರು. ಪ್ರತಿಯೊಂದು ಅಖಾಡದ ಸಾಧುಗಳು ಅವರ ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾಕುಂಭದ ಮೊದಲ ದಿನ 1.75 ಕೋಟಿ ಮತ್ತು ಎರಡನೇ ದಿನ 3.5 ಕೋಟಿ ಸೇರಿ ಒಟ್ಟು 5.25 ಕೋಟಿ ಜನರು ಎರಡು ದಿನದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಪಾಲ್ಗೊಂಡಿರುವ ಭಕ್ತರ ಮೇಲೆ ಉತ್ತರ ಪ್ರದೇಶ ಸರ್ಕಾರ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದೆ. ಅಮೃತಸ್ನಾನ ಮಾಡುವ ಭಕ್ತರ ಮೇಲೆ ಪ್ರತಿ ದಿನ 20 ಕ್ವಿಂಟಾಲ್ ಗುಲಾಬಿ ಹೂವಿನ ದಳಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…