ಮಹಾಕುಂಭ ಮೇಳ: ಹಿಂದೂ ಧರ್ಮದಲ್ಲಿ ದೊಡ್ಡ ಮತ್ತು ಹೆಚ್ಚು ಪವಿತ್ರ ಉತ್ಸವ: ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರ ತ್ರಿವೇಣಿ ಸಂಗಮದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಉತ್ಸವ: 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ

ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಜನವರಿ 13 ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ಜರುಗಲಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಮೂರು ಮಹಾನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳದಲ್ಲಿ ಶಾಹಿ ಸ್ನಾನ ಮಾಡುವುದರಿಂದ ಜನರು ಮೋಕ್ಷವನ್ನು ಪಡೆಯುತ್ತಾರೆ ಎನ್ನುವ ನಂಬಿಕೆ ಇದೆ. ಹೀಗಾಗಿ ದೇಶದ ಮೂಲೆ ಮೂಲೆಯಿಂದ ಜನ ಮಹಾ ಕುಂಭಮೇಳಕ್ಕೆ ಆಗಮಿಸುತ್ತಾರೆ.

ಪ್ರಮುಖ ಕುಂಭ ಸ್ನಾನದ ದಿನಾಂಕ

ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ

ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಅಮೃತ(ಶಾಹಿ) ಸ್ನಾನ

ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ

ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನ

ಫೆಬ್ರವರಿ 26, 2025ರಂದು ಮಹಾ ಶಿವರಾತ್ರಿ ಹಾಗೂ ಮಹಾ ಕುಂಭಮೇಳಕ್ಕೆ ತೆರೆ

ಮಕರ ಸಂಕ್ರಾಂತಿ ಪ್ರಯುಕ್ತ ಮಹಾಕುಂಭ ಮೇಳದಲ್ಲಿ ಸಾಧು, ಸಂತರು ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡಿದ್ದರು. ಮಹಾಕುಂಭ ಮೇಳದ ಎರಡನೇ ದಿನ 3.5 ಕೋಟಿ ಭಕ್ತರು ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾಗಿದ್ದಾರೆ.

ಮೊದಲ ಅಮೃತ ಸ್ನಾನ (ಶಾಹಿ ಸ್ನಾನ)ದಲ್ಲಿ ಬಹುತೇಕ ಎಲ್ಲಾ ಅಖಾಡಗಳ ಸಾಧುಗಳು ಪಾಲ್ಗೊಂಡಿದ್ದರು. ಪ್ರತಿಯೊಂದು ಅಖಾಡದ ಸಾಧುಗಳು ಅವರ ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಮಹಾಕುಂಭದ ಮೊದಲ ದಿನ 1.75 ಕೋಟಿ ಮತ್ತು ಎರಡನೇ ದಿನ 3.5 ಕೋಟಿ ಸೇರಿ ಒಟ್ಟು 5.25 ಕೋಟಿ ಜನರು ಎರಡು ದಿನದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಭಕ್ತರ ಮೇಲೆ ಪುಷ್ಪವೃಷ್ಟಿ: ಮಹಾಕುಂಭ ಮೇಳದಲ್ಲಿ

ಪಾಲ್ಗೊಂಡಿರುವ ಭಕ್ತರ ಮೇಲೆ ಉತ್ತರ ಪ್ರದೇಶ ಸರ್ಕಾರ ಹೆಲಿಕಾಪ್ಟ‌ರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದೆ. ಅಮೃತಸ್ನಾನ ಮಾಡುವ ಭಕ್ತರ ಮೇಲೆ ಪ್ರತಿ ದಿನ 20 ಕ್ವಿಂಟಾಲ್ ಗುಲಾಬಿ ಹೂವಿನ ದಳಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

11 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago