ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಜನವರಿ 13 ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ಜರುಗಲಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಪ್ರಮುಖ ಕುಂಭ ಸ್ನಾನದ ದಿನಾಂಕ
ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ
ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಅಮೃತ(ಶಾಹಿ) ಸ್ನಾನ
ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ
ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನ
ಫೆಬ್ರವರಿ 26, 2025ರಂದು ಮಹಾ ಶಿವರಾತ್ರಿ ಹಾಗೂ ಮಹಾ ಕುಂಭಮೇಳಕ್ಕೆ ತೆರೆ
ಮೊದಲ ಅಮೃತ ಸ್ನಾನ (ಶಾಹಿ ಸ್ನಾನ)ದಲ್ಲಿ ಬಹುತೇಕ ಎಲ್ಲಾ ಅಖಾಡಗಳ ಸಾಧುಗಳು ಪಾಲ್ಗೊಂಡಿದ್ದರು. ಪ್ರತಿಯೊಂದು ಅಖಾಡದ ಸಾಧುಗಳು ಅವರ ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾಕುಂಭದ ಮೊದಲ ದಿನ 1.75 ಕೋಟಿ ಮತ್ತು ಎರಡನೇ ದಿನ 3.5 ಕೋಟಿ ಸೇರಿ ಒಟ್ಟು 5.25 ಕೋಟಿ ಜನರು ಎರಡು ದಿನದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಪಾಲ್ಗೊಂಡಿರುವ ಭಕ್ತರ ಮೇಲೆ ಉತ್ತರ ಪ್ರದೇಶ ಸರ್ಕಾರ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದೆ. ಅಮೃತಸ್ನಾನ ಮಾಡುವ ಭಕ್ತರ ಮೇಲೆ ಪ್ರತಿ ದಿನ 20 ಕ್ವಿಂಟಾಲ್ ಗುಲಾಬಿ ಹೂವಿನ ದಳಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…