ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಜನವರಿ 13 ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ಜರುಗಲಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಪ್ರಮುಖ ಕುಂಭ ಸ್ನಾನದ ದಿನಾಂಕ
ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ
ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಅಮೃತ(ಶಾಹಿ) ಸ್ನಾನ
ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ
ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನ
ಫೆಬ್ರವರಿ 26, 2025ರಂದು ಮಹಾ ಶಿವರಾತ್ರಿ ಹಾಗೂ ಮಹಾ ಕುಂಭಮೇಳಕ್ಕೆ ತೆರೆ
ಮೊದಲ ಅಮೃತ ಸ್ನಾನ (ಶಾಹಿ ಸ್ನಾನ)ದಲ್ಲಿ ಬಹುತೇಕ ಎಲ್ಲಾ ಅಖಾಡಗಳ ಸಾಧುಗಳು ಪಾಲ್ಗೊಂಡಿದ್ದರು. ಪ್ರತಿಯೊಂದು ಅಖಾಡದ ಸಾಧುಗಳು ಅವರ ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾಕುಂಭದ ಮೊದಲ ದಿನ 1.75 ಕೋಟಿ ಮತ್ತು ಎರಡನೇ ದಿನ 3.5 ಕೋಟಿ ಸೇರಿ ಒಟ್ಟು 5.25 ಕೋಟಿ ಜನರು ಎರಡು ದಿನದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಪಾಲ್ಗೊಂಡಿರುವ ಭಕ್ತರ ಮೇಲೆ ಉತ್ತರ ಪ್ರದೇಶ ಸರ್ಕಾರ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದೆ. ಅಮೃತಸ್ನಾನ ಮಾಡುವ ಭಕ್ತರ ಮೇಲೆ ಪ್ರತಿ ದಿನ 20 ಕ್ವಿಂಟಾಲ್ ಗುಲಾಬಿ ಹೂವಿನ ದಳಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…