ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿದೆ. ಈ ಮಹಾ ಕುಂಭಮೇಳವು ಹೊಸ ವರ್ಷದ ಮೊದಲ ಹುಣ್ಣಿಮೆ ಜನವರಿ 13 ರಂದು ಆರಂಭವಾಗಿ 2025ರ ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರವರೆಗೆ ಜರುಗಲಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 12 ವರ್ಷಕ್ಕೊಮ್ಮೆ ನಡೆಯುವ ಈ ಮಹಾ ಕುಂಭಮೇಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ ಜಗತ್ತಿನಾದ್ಯಂತದಿಂದ 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಪ್ರಮುಖ ಕುಂಭ ಸ್ನಾನದ ದಿನಾಂಕ
ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ
ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಅಮೃತ(ಶಾಹಿ) ಸ್ನಾನ
ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ
ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನ
ಫೆಬ್ರವರಿ 26, 2025ರಂದು ಮಹಾ ಶಿವರಾತ್ರಿ ಹಾಗೂ ಮಹಾ ಕುಂಭಮೇಳಕ್ಕೆ ತೆರೆ
ಮೊದಲ ಅಮೃತ ಸ್ನಾನ (ಶಾಹಿ ಸ್ನಾನ)ದಲ್ಲಿ ಬಹುತೇಕ ಎಲ್ಲಾ ಅಖಾಡಗಳ ಸಾಧುಗಳು ಪಾಲ್ಗೊಂಡಿದ್ದರು. ಪ್ರತಿಯೊಂದು ಅಖಾಡದ ಸಾಧುಗಳು ಅವರ ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾಕುಂಭದ ಮೊದಲ ದಿನ 1.75 ಕೋಟಿ ಮತ್ತು ಎರಡನೇ ದಿನ 3.5 ಕೋಟಿ ಸೇರಿ ಒಟ್ಟು 5.25 ಕೋಟಿ ಜನರು ಎರಡು ದಿನದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಪಾಲ್ಗೊಂಡಿರುವ ಭಕ್ತರ ಮೇಲೆ ಉತ್ತರ ಪ್ರದೇಶ ಸರ್ಕಾರ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದೆ. ಅಮೃತಸ್ನಾನ ಮಾಡುವ ಭಕ್ತರ ಮೇಲೆ ಪ್ರತಿ ದಿನ 20 ಕ್ವಿಂಟಾಲ್ ಗುಲಾಬಿ ಹೂವಿನ ದಳಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…