Categories: ರಾಜ್ಯ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ
ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

8 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

9 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

14 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

16 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

19 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

20 hours ago