ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ
ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…