Categories: ರಾಜ್ಯ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ
ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

11 minutes ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 hour ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

10 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

20 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

20 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago