ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ
ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…