ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ
ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…