Categories: ಕೋಲಾರ

ಮಹಿಳಾ ಕಾಲೇಜಿನ ಹೊಸ ಕಟ್ಟಡ ತಾತ್ಕಾಲಿಕವಾಗಿ ನಿಲ್ಲಿಸಲು ಸಚಿವ ಸುಧಾಕರ್ ಸೂಚನೆ

ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.

ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.

ಬಾಲಕರ ಕಾಲೇಜಿನಲ್ಲೂ ಕಳಪೆ ಕಾಮಗಾರಿಯಾಗಿದೆ ಎಂದು ವರದಿಯಾಗಿದೆ ಕೂಡಲೇ ಎನ್.ಡಿ.ಟಿ ವತಿಯಿಂದ ಪರಿಶೀಲನೆ ನಡೆಸಿ ಯಾರು ಗುತ್ತಿಗೆದಾರರು ಯಾವ ಏಜೆನ್ಸಿ ಅಂತ ಕೂಡಲೇ ವರದಿ ಕೊಡಬೇಕು ಎಂದು ಆದೇಶ ನೀಡಿದರು ಇದೇ ಸಂದರ್ಭದಲ್ಲಿ ಕಾಲೇಜಿನ ಶೌಚಾಲಯ ಸೇರಿದಂತೆ ನೀರಿನ ವ್ಯವಸ್ಥೆ ಸರಿಯಾಗಿಲ್ಲ ವಿಧ್ಯಾರ್ಥಿಗಳು ಕಂಡಾಗ ಬಸ್ ನಿಲ್ಲಿಸಲ್ಲ ಎಂದು ವಿಧ್ಯಾರ್ಥಿಗಳು ಸಚಿವರ ಮುಂದೆ ಇಟ್ಟರು ಕೂಡಲೇ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡು ನೋಡಿ ಇಲ್ಲಿ ಬಡವರ ಮಕ್ಕಳು ಹೆಚ್ಚಾಗಿ ಬರೋದು ಅವರ ಯೋಗಕ್ಷೇಮ ಮುಖ್ಯ ಮುಂದೆ ಈ ರೀತಿಯಲ್ಲಿ ಆಗದಂತೆ ನೋಡಿಕೊಳ್ಳಿ ಕೆ.ಎಸ್.ಆರ್.ಟಿ.ಸಿ ಡಿಸಿಗೆ ಪೋನ್ ಮಾಡಿ ನಿಮ್ಮ ಬಸ್ ಚಾಲಕರು ಮತ್ತು ನಿರ್ವಾಹಕರು ಬಾಸ್ ಗಳು ಆಗಿದ್ದಾರೆ ನೀವು ನೇರವಾಗಿ ಆದೇಶ ಮಾಡುವಂತೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

2 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

12 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

13 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

18 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

20 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

24 hours ago