ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.
ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.
ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…