ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.
ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.
ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…