Categories: ಕೋಲಾರ

ಮಹಿಳಾ ಕಾಲೇಜಿನ ಹೊಸ ಕಟ್ಟಡ ತಾತ್ಕಾಲಿಕವಾಗಿ ನಿಲ್ಲಿಸಲು ಸಚಿವ ಸುಧಾಕರ್ ಸೂಚನೆ

ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.

ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.

ಬಾಲಕರ ಕಾಲೇಜಿನಲ್ಲೂ ಕಳಪೆ ಕಾಮಗಾರಿಯಾಗಿದೆ ಎಂದು ವರದಿಯಾಗಿದೆ ಕೂಡಲೇ ಎನ್.ಡಿ.ಟಿ ವತಿಯಿಂದ ಪರಿಶೀಲನೆ ನಡೆಸಿ ಯಾರು ಗುತ್ತಿಗೆದಾರರು ಯಾವ ಏಜೆನ್ಸಿ ಅಂತ ಕೂಡಲೇ ವರದಿ ಕೊಡಬೇಕು ಎಂದು ಆದೇಶ ನೀಡಿದರು ಇದೇ ಸಂದರ್ಭದಲ್ಲಿ ಕಾಲೇಜಿನ ಶೌಚಾಲಯ ಸೇರಿದಂತೆ ನೀರಿನ ವ್ಯವಸ್ಥೆ ಸರಿಯಾಗಿಲ್ಲ ವಿಧ್ಯಾರ್ಥಿಗಳು ಕಂಡಾಗ ಬಸ್ ನಿಲ್ಲಿಸಲ್ಲ ಎಂದು ವಿಧ್ಯಾರ್ಥಿಗಳು ಸಚಿವರ ಮುಂದೆ ಇಟ್ಟರು ಕೂಡಲೇ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡು ನೋಡಿ ಇಲ್ಲಿ ಬಡವರ ಮಕ್ಕಳು ಹೆಚ್ಚಾಗಿ ಬರೋದು ಅವರ ಯೋಗಕ್ಷೇಮ ಮುಖ್ಯ ಮುಂದೆ ಈ ರೀತಿಯಲ್ಲಿ ಆಗದಂತೆ ನೋಡಿಕೊಳ್ಳಿ ಕೆ.ಎಸ್.ಆರ್.ಟಿ.ಸಿ ಡಿಸಿಗೆ ಪೋನ್ ಮಾಡಿ ನಿಮ್ಮ ಬಸ್ ಚಾಲಕರು ಮತ್ತು ನಿರ್ವಾಹಕರು ಬಾಸ್ ಗಳು ಆಗಿದ್ದಾರೆ ನೀವು ನೇರವಾಗಿ ಆದೇಶ ಮಾಡುವಂತೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

30 minutes ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

3 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

8 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

9 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

10 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

11 hours ago