ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.
ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.
ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…