Categories: ಕೋಲಾರ

ಮಹಿಳಾ ಕಾಲೇಜಿನ ಹೊಸ ಕಟ್ಟಡ ತಾತ್ಕಾಲಿಕವಾಗಿ ನಿಲ್ಲಿಸಲು ಸಚಿವ ಸುಧಾಕರ್ ಸೂಚನೆ

ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.

ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.

ಬಾಲಕರ ಕಾಲೇಜಿನಲ್ಲೂ ಕಳಪೆ ಕಾಮಗಾರಿಯಾಗಿದೆ ಎಂದು ವರದಿಯಾಗಿದೆ ಕೂಡಲೇ ಎನ್.ಡಿ.ಟಿ ವತಿಯಿಂದ ಪರಿಶೀಲನೆ ನಡೆಸಿ ಯಾರು ಗುತ್ತಿಗೆದಾರರು ಯಾವ ಏಜೆನ್ಸಿ ಅಂತ ಕೂಡಲೇ ವರದಿ ಕೊಡಬೇಕು ಎಂದು ಆದೇಶ ನೀಡಿದರು ಇದೇ ಸಂದರ್ಭದಲ್ಲಿ ಕಾಲೇಜಿನ ಶೌಚಾಲಯ ಸೇರಿದಂತೆ ನೀರಿನ ವ್ಯವಸ್ಥೆ ಸರಿಯಾಗಿಲ್ಲ ವಿಧ್ಯಾರ್ಥಿಗಳು ಕಂಡಾಗ ಬಸ್ ನಿಲ್ಲಿಸಲ್ಲ ಎಂದು ವಿಧ್ಯಾರ್ಥಿಗಳು ಸಚಿವರ ಮುಂದೆ ಇಟ್ಟರು ಕೂಡಲೇ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡು ನೋಡಿ ಇಲ್ಲಿ ಬಡವರ ಮಕ್ಕಳು ಹೆಚ್ಚಾಗಿ ಬರೋದು ಅವರ ಯೋಗಕ್ಷೇಮ ಮುಖ್ಯ ಮುಂದೆ ಈ ರೀತಿಯಲ್ಲಿ ಆಗದಂತೆ ನೋಡಿಕೊಳ್ಳಿ ಕೆ.ಎಸ್.ಆರ್.ಟಿ.ಸಿ ಡಿಸಿಗೆ ಪೋನ್ ಮಾಡಿ ನಿಮ್ಮ ಬಸ್ ಚಾಲಕರು ಮತ್ತು ನಿರ್ವಾಹಕರು ಬಾಸ್ ಗಳು ಆಗಿದ್ದಾರೆ ನೀವು ನೇರವಾಗಿ ಆದೇಶ ಮಾಡುವಂತೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

33 minutes ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

2 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

10 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

20 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

21 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago